Advertisement
ಸುದ್ದಿಗಳು

ಕೊರೊನಾ ವೈರಸ್ ಭೀತಿ | ಮಾ.31 ರವರೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ | ಆತಂಕ-ಭಯ ಬೇಡ- ಇರಲಿ ಎಚ್ಚರ | ಕಾಸರಗೋಡು ಗಡಿಭಾಗದಲ್ಲಿ ಬೇಕಿದೆ ಕಟ್ಟೆಚ್ಚರ | ದೇಶದ 75 ಜಿಲ್ಲೆಗಳು ಮಾ.31 ರವರೆಗೆ ಬಂದ್ |

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಇದುವರೆಗೆ ಕೊರೊನಾ ವೈರಸ್ ಸೋಂಕು ಇರುವುದು  ದೃಢಪಟ್ಟಿಲ್ಲ. ಆದರೆ ಕಾಸರಗೋಡು ಗಡಿಭಾಗವಾದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಾ.31 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಲಾಕ್ ಡೌನ್ ಮಾಡಲಾಗುತ್ತಿದೆ.  ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಆತಂಕ-ಭಯ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಅಗತ್ಯ ಸೇವೆಗಳು ಲಭ್ಯವಿದೆ. ಕೊರೊನಾ ವೈರಸ್ ಹರಡುವುದನ್ನು  ತಡೆಯಲು ಸೂಕ್ತ ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ.

ಕಾಸರಗೋಡು ಜಿಲ್ಲೆಯು ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡು ಇರುವುದರಿಂದ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ. ಈಗಾಗಲೇ ಕಾಸರಗೋಡು ಪ್ರದೇಶದಲ್ಲಿಯೇ ಒಟ್ಟು 12 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ದೃಢಪಟ್ಟಿದೆ. ಸೋಂಕು ಇರುವ ವ್ಯಕ್ತಿಗಳು ಈ ಹಿಂದೆ ಸಾಕಷ್ಟು ಕಡೆ ಓಡಾಡಿದ ಹಿನ್ನೆಲೆಯಲ್ಲಿ  ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ. ವಿಶೇಷವಾಗಿ ಕಾಸರಗೋಡು-ದಕ ಜಿಲ್ಲೆ ಗಡಿಭಾಗದಲ್ಲಿನ ಜನರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಮಾ.31 ರವರೆಗೆ ದ ಕ ಜಿಲ್ಲೆಯೂ ಲಾಕ್ ಡೌನ್ ಎಂಬ ಆತಂಕ ಹಾಗೂ ಭಯ ಅನಗತ್ಯ. ಅಗತ್ಯ ಸೇವೆಗಳು ಲಭ್ಯವಿದ್ದು ಗುಂಪಾಗಿ ಸೇರುವುದು  ಹಾಗು ಅನಗತ್ಯವಾಗಿ ನಗರ ಪ್ರದೇಶಗಳಿಗೆ ಹೋಗುವುದು ತಡೆಯುವುದೇ ಇದರ ಮುಖ್ಯ ಉದ್ದೇಶವಾಗಿದೆ. ವಾರಗಳ ಕಾಲ ಜನರು ಈ ಹೋರಾಟದಲ್ಲಿ ಸಹಕರಿಸಿದರೆ ಹಾಗೂ ವಿದೇಶದಿಮದ ಬರುವ ವ್ಯಕ್ತಿಗಳಿಗೆ ತಿಳಿಹೇಳಿ, ಮನೆಯವರೂ ಮುಂಜಾಗ್ರತೆ ವಹಿಸಿದರೆ ಮುಂದಿನ 15 ದಿನಗಳಲ್ಲಿ  ಯಥಾ ಸ್ಥಿತಿ ಬರಬಹುದಾಗಿದೆ. ಹೀಗಾಗಿ ಪ್ರತಿಯೊಬ್ಬ ನಾಗರಿಕನೂ ಜಾಗೃತವಾಗುವುದೇ ಕೊರೊನಾ ವೈರಸ್ ತಡೆಗೆ ಇರುವ ಪರಿಹಾರವಾಗಿದೆ.

ಈ ನಡುವೆ ದೇಶದಲ್ಲಿ ಕೊರೊನಾ ವೈರಸ್ ಪತ್ತೆಯಾದ 75 ಜಿಲ್ಲೆಗಳು ಬಂದ್ ಆಗಲಿದೆ. ಅಗತ್ಯ ಸೇವೆಗಳು ಮಾತ್ರವೇ ಲಭ್ಯವಿದ್ದು ಇತರ ಯಾವುದೇ ಸೇವೆಗಳು ಮಾ.31 ರವರೆಗೆ ಲಭ್ಯವಾಗುವುದಿಲ್ಲ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

13 minutes ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

2 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

3 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

10 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

11 hours ago