Advertisement
ಸುದ್ದಿಗಳು

ಕೊರೊನಾ ವೈರಸ್ ಭೀತಿ | ಮಾ.31 ರವರೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ | ಆತಂಕ-ಭಯ ಬೇಡ- ಇರಲಿ ಎಚ್ಚರ | ಕಾಸರಗೋಡು ಗಡಿಭಾಗದಲ್ಲಿ ಬೇಕಿದೆ ಕಟ್ಟೆಚ್ಚರ | ದೇಶದ 75 ಜಿಲ್ಲೆಗಳು ಮಾ.31 ರವರೆಗೆ ಬಂದ್ |

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಇದುವರೆಗೆ ಕೊರೊನಾ ವೈರಸ್ ಸೋಂಕು ಇರುವುದು  ದೃಢಪಟ್ಟಿಲ್ಲ. ಆದರೆ ಕಾಸರಗೋಡು ಗಡಿಭಾಗವಾದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಾ.31 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಲಾಕ್ ಡೌನ್ ಮಾಡಲಾಗುತ್ತಿದೆ.  ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಆತಂಕ-ಭಯ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಅಗತ್ಯ ಸೇವೆಗಳು ಲಭ್ಯವಿದೆ. ಕೊರೊನಾ ವೈರಸ್ ಹರಡುವುದನ್ನು  ತಡೆಯಲು ಸೂಕ್ತ ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ.

ಕಾಸರಗೋಡು ಜಿಲ್ಲೆಯು ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡು ಇರುವುದರಿಂದ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ. ಈಗಾಗಲೇ ಕಾಸರಗೋಡು ಪ್ರದೇಶದಲ್ಲಿಯೇ ಒಟ್ಟು 12 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ದೃಢಪಟ್ಟಿದೆ. ಸೋಂಕು ಇರುವ ವ್ಯಕ್ತಿಗಳು ಈ ಹಿಂದೆ ಸಾಕಷ್ಟು ಕಡೆ ಓಡಾಡಿದ ಹಿನ್ನೆಲೆಯಲ್ಲಿ  ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ. ವಿಶೇಷವಾಗಿ ಕಾಸರಗೋಡು-ದಕ ಜಿಲ್ಲೆ ಗಡಿಭಾಗದಲ್ಲಿನ ಜನರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಮಾ.31 ರವರೆಗೆ ದ ಕ ಜಿಲ್ಲೆಯೂ ಲಾಕ್ ಡೌನ್ ಎಂಬ ಆತಂಕ ಹಾಗೂ ಭಯ ಅನಗತ್ಯ. ಅಗತ್ಯ ಸೇವೆಗಳು ಲಭ್ಯವಿದ್ದು ಗುಂಪಾಗಿ ಸೇರುವುದು  ಹಾಗು ಅನಗತ್ಯವಾಗಿ ನಗರ ಪ್ರದೇಶಗಳಿಗೆ ಹೋಗುವುದು ತಡೆಯುವುದೇ ಇದರ ಮುಖ್ಯ ಉದ್ದೇಶವಾಗಿದೆ. ವಾರಗಳ ಕಾಲ ಜನರು ಈ ಹೋರಾಟದಲ್ಲಿ ಸಹಕರಿಸಿದರೆ ಹಾಗೂ ವಿದೇಶದಿಮದ ಬರುವ ವ್ಯಕ್ತಿಗಳಿಗೆ ತಿಳಿಹೇಳಿ, ಮನೆಯವರೂ ಮುಂಜಾಗ್ರತೆ ವಹಿಸಿದರೆ ಮುಂದಿನ 15 ದಿನಗಳಲ್ಲಿ  ಯಥಾ ಸ್ಥಿತಿ ಬರಬಹುದಾಗಿದೆ. ಹೀಗಾಗಿ ಪ್ರತಿಯೊಬ್ಬ ನಾಗರಿಕನೂ ಜಾಗೃತವಾಗುವುದೇ ಕೊರೊನಾ ವೈರಸ್ ತಡೆಗೆ ಇರುವ ಪರಿಹಾರವಾಗಿದೆ.

ಈ ನಡುವೆ ದೇಶದಲ್ಲಿ ಕೊರೊನಾ ವೈರಸ್ ಪತ್ತೆಯಾದ 75 ಜಿಲ್ಲೆಗಳು ಬಂದ್ ಆಗಲಿದೆ. ಅಗತ್ಯ ಸೇವೆಗಳು ಮಾತ್ರವೇ ಲಭ್ಯವಿದ್ದು ಇತರ ಯಾವುದೇ ಸೇವೆಗಳು ಮಾ.31 ರವರೆಗೆ ಲಭ್ಯವಾಗುವುದಿಲ್ಲ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

6 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

12 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

12 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

2 days ago