Advertisement
ಕೃಷಿ

ಮಿಡತೆ ಹಾವಳಿ – ರೈತರಿಗೆ ಇಲಾಖೆಗಳಿಂದ ಸಲಹೆ

Share

 

ಮಿಡತೆ ದಾಳಿ ಬಗ್ಗೆ ಕೃಷಿ ಇಲಾಖೆ ಹೀಗೆ ಸಲಹೆ ನೀಡುತ್ತದೆ….

ಮಿಡತೆ ಕೀಟ ಹಾವಳಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ  ಕಾಣಿಸಿಕೊಂಡಿರುತ್ತದೆ ಹಾಗೂ ಕಾಣಿಸಿಕೊಂಡ ಮಿಡತೆಗಳು ಮರುಭೂವಿಯಲ್ಲಿ ಕಂಡುಬಂದ ಮಿಡತೆಗಳು ಆಗಿರುವುದಿಲ್ಲ. ಮಿಡತೆಗಳು ಬೆಳೆಗೆ ಹಾನಿ ಮಾಡಿದಲ್ಲಿ ಅವುಗಳ ನಿಯಂತ್ರಣಕ್ಕಾಗಿ,  ಕೀಟವು ಬೆಳೆಗಳಲ್ಲಿ ಕಂಡುಬಂದಲ್ಲಿ, ಡ್ರಮ್‍ ಅಥವಾ ಪಾತ್ರೆ ಅಥವಾ ಫಲಕಗಳನ್ನು ಬಡಿಯುವುದರ ಮೂಲಕ ಹೆಚ್ಚಾಗಿ ಶಬ್ದವನ್ನು ಮಾಡಿ ಮಿಡತೆ ಸಮೂಹವನ್ನು ಇತರೆಡೆಗೆ ಓಡಿಸಬಹುದು.

ಬೇವಿನ ಮೂಲದ ಕೀಟನಾಶಕಗಳನ್ನು (0.15% ಇ.ಸಿ @3ಎಂ.ಎಲ್/ಲೀ) ಬೆಳೆಗಳಲ್ಲಿ ಸಿಂಪಡಿಸುವುದರಿಂದ ಕೀಟವು ಬೆಳೆ ಹಾನಿ ಮಾಡುವುದು ಕಡಿಮೆಯಾಗುತ್ತದೆ. ಕೀಟ ಬಾಧಿತ ಪ್ರದೇಶದಲ್ಲಿ ಹೊಗೆ ಮತ್ತು ಬೆಂಕಿಯನ್ನು ಹಾಕುವುದರಿಂದ ಕೀಟವನ್ನು ಬೇರೆಡೆಗೆ ಓಡಿಸಬಹುದು.

ಕೀಟವು ಮರಿಹುಳುವಾಗಿದ್ದಲ್ಲಿ ಬಾಧಿತ ಪ್ರದೇಶ ಕನಿಷ್ಟ 2 ಅಡಿ ಆಳ ಮತ್ತು 3 ಅಡಿ ಅಗಲದ ಗುಂಡಿಗಳನ್ನು ನಿರ್ಮಿಸಿ ಮರಿಹುಳುಗಳನ್ನು ಸೆರೆ ಹಿಡಿದು ನಾಶಪಡಿಸಬಹುದು. ಮಿಡತೆ ಹಗಲಿನಲ್ಲಿ ಚಲಿಸಿ ರಾತ್ರಿ ವೇಳೆ ಮರಗಿಡಗಳ ಮೇಲೆ ಆಶ್ರಯ ಪಡೆಯುವುದರಿಂದ ಟ್ರ್ಯಾಕ್ಟರ್ ಮೌಂಟೆಡ್‍ ಜೆಟ್ ಸ್ಪ್ರೇಯರ್ಗಳ ಮೂಲಕ ಕೀಟನಾಶಕಗಳನ್ನು ಸಿಂಪಡಿಸಬಹುದು.ಆದರೆ ಈ ಕೀಟನಾಶಕಗಳನ್ನು ಜಲಮೂಲಗಳ ಸಮೀಪ ಸಿಂಪಡಿಸದಂತೆ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ.

ಬೆಳೆಯ ಅಥವಾ ಮರಗಳ ಮೇಲೆ ಮರುಭೂಮಿ ಮಿಡತೆ ಕಂಡುಬಂದಲ್ಲಿ ಕೀಟನಾಶಕ ಕ್ಲೊರೋಪೈರಿಪಾಸ್ 20%  ಪ್ರತೀ ಹೆಕ್ಟರ್ ಗೆ 1.2 ಲೀ, ಕೀಟನಾಶಕ ಕ್ಲೊರೋಪೈರಿಪಾಸ್ 50%  ಪ್ರತೀ ಹೆಕ್ಟರ್ ಗೆ 480 ಎಂ.ಎಲ್, ಕೀಟನಾಶ ಕಡೆಲ್ಟಮೆಥ್ರಿನ್ 2.8 ಪ್ರತಿ ಹೆಕ್ಟೇರ್ ಗೆ 450 ಎಂ.ಎಲ್, ಕೀಟನಾಶಕ ಫಿಪ್ರೋನಿಲ್ 5% ಎಸ್.ಸಿ ಪ್ರತಿ ಹೆಕ್ಟೇರ್ ಗೆ 125 ಎಂ.ಎಲ್, ಕೀಟನಾಶಕ ಫಿಪ್ರೋನಿಲ್ 2.8% ಇ.ಸಿ ಪ್ರತಿ ಹೆಕ್ಟೇರ್ ಗೆ 225 ಎಂ.ಎಲ್, ಕೀಟನಾಶ ಕಲಾಮ್ಡಾ ಸಹಲೋಥ್ರಿನ್ 5.0% ಇ.ಸಿ.ಪ್ರತಿಹೆಕ್ಟೇರ್ ಗೆ 400 ಎಂ.ಎಲ್, ಕೀಟನಾಶ ಕಲಾಮ್ಡಾ ಸಹಲೋಥ್ರಿನ್ 10.0%  ಡಬ್ಲ್ಯೂಪಿ ಪ್ರತಿ ಹೆಕ್ಟೇರ್ ಗೆ 200 ಗ್ರಾಂ, ಕೀಟನಾಶಕ ಮಲಾಥಿಯಾನ್ 50% ಇ.ಸಿ.ಪ್ರತಿ ಹೆಕ್ಟೇರ್‍ ಗೆ 1.85 ಲೀ, ಕೀಟನಾಶಕ ಮಲಾಥಿಯಾನ್ 25% ಡಬ್ಲ್ಯೂಪಿ ಪ್ರತಿ ಹೆಕ್ಟೇರ್‍ ಗೆ 3.7 ಕಿ.ಗ್ರಾಂ ಕೀಟನಾಶಕಗಳನ್ನು ಬಳಸಿ ಹತೋಟಿ ಮಾಡಬಹುದು ಎಂದು ಪ್ರಕಟಣೆ ತಿಳಿಸುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

7 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

17 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

22 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

22 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

22 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

22 hours ago