Advertisement
ಕೃಷಿ

ಮಿಡತೆ ಹಾವಳಿ – ರೈತರಿಗೆ ಇಲಾಖೆಗಳಿಂದ ಸಲಹೆ

Share

 

Advertisement
Advertisement
Advertisement
Advertisement

ಮಿಡತೆ ದಾಳಿ ಬಗ್ಗೆ ಕೃಷಿ ಇಲಾಖೆ ಹೀಗೆ ಸಲಹೆ ನೀಡುತ್ತದೆ….

Advertisement

ಮಿಡತೆ ಕೀಟ ಹಾವಳಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ  ಕಾಣಿಸಿಕೊಂಡಿರುತ್ತದೆ ಹಾಗೂ ಕಾಣಿಸಿಕೊಂಡ ಮಿಡತೆಗಳು ಮರುಭೂವಿಯಲ್ಲಿ ಕಂಡುಬಂದ ಮಿಡತೆಗಳು ಆಗಿರುವುದಿಲ್ಲ. ಮಿಡತೆಗಳು ಬೆಳೆಗೆ ಹಾನಿ ಮಾಡಿದಲ್ಲಿ ಅವುಗಳ ನಿಯಂತ್ರಣಕ್ಕಾಗಿ,  ಕೀಟವು ಬೆಳೆಗಳಲ್ಲಿ ಕಂಡುಬಂದಲ್ಲಿ, ಡ್ರಮ್‍ ಅಥವಾ ಪಾತ್ರೆ ಅಥವಾ ಫಲಕಗಳನ್ನು ಬಡಿಯುವುದರ ಮೂಲಕ ಹೆಚ್ಚಾಗಿ ಶಬ್ದವನ್ನು ಮಾಡಿ ಮಿಡತೆ ಸಮೂಹವನ್ನು ಇತರೆಡೆಗೆ ಓಡಿಸಬಹುದು.

ಬೇವಿನ ಮೂಲದ ಕೀಟನಾಶಕಗಳನ್ನು (0.15% ಇ.ಸಿ @3ಎಂ.ಎಲ್/ಲೀ) ಬೆಳೆಗಳಲ್ಲಿ ಸಿಂಪಡಿಸುವುದರಿಂದ ಕೀಟವು ಬೆಳೆ ಹಾನಿ ಮಾಡುವುದು ಕಡಿಮೆಯಾಗುತ್ತದೆ. ಕೀಟ ಬಾಧಿತ ಪ್ರದೇಶದಲ್ಲಿ ಹೊಗೆ ಮತ್ತು ಬೆಂಕಿಯನ್ನು ಹಾಕುವುದರಿಂದ ಕೀಟವನ್ನು ಬೇರೆಡೆಗೆ ಓಡಿಸಬಹುದು.

Advertisement

ಕೀಟವು ಮರಿಹುಳುವಾಗಿದ್ದಲ್ಲಿ ಬಾಧಿತ ಪ್ರದೇಶ ಕನಿಷ್ಟ 2 ಅಡಿ ಆಳ ಮತ್ತು 3 ಅಡಿ ಅಗಲದ ಗುಂಡಿಗಳನ್ನು ನಿರ್ಮಿಸಿ ಮರಿಹುಳುಗಳನ್ನು ಸೆರೆ ಹಿಡಿದು ನಾಶಪಡಿಸಬಹುದು. ಮಿಡತೆ ಹಗಲಿನಲ್ಲಿ ಚಲಿಸಿ ರಾತ್ರಿ ವೇಳೆ ಮರಗಿಡಗಳ ಮೇಲೆ ಆಶ್ರಯ ಪಡೆಯುವುದರಿಂದ ಟ್ರ್ಯಾಕ್ಟರ್ ಮೌಂಟೆಡ್‍ ಜೆಟ್ ಸ್ಪ್ರೇಯರ್ಗಳ ಮೂಲಕ ಕೀಟನಾಶಕಗಳನ್ನು ಸಿಂಪಡಿಸಬಹುದು.ಆದರೆ ಈ ಕೀಟನಾಶಕಗಳನ್ನು ಜಲಮೂಲಗಳ ಸಮೀಪ ಸಿಂಪಡಿಸದಂತೆ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ.

ಬೆಳೆಯ ಅಥವಾ ಮರಗಳ ಮೇಲೆ ಮರುಭೂಮಿ ಮಿಡತೆ ಕಂಡುಬಂದಲ್ಲಿ ಕೀಟನಾಶಕ ಕ್ಲೊರೋಪೈರಿಪಾಸ್ 20%  ಪ್ರತೀ ಹೆಕ್ಟರ್ ಗೆ 1.2 ಲೀ, ಕೀಟನಾಶಕ ಕ್ಲೊರೋಪೈರಿಪಾಸ್ 50%  ಪ್ರತೀ ಹೆಕ್ಟರ್ ಗೆ 480 ಎಂ.ಎಲ್, ಕೀಟನಾಶ ಕಡೆಲ್ಟಮೆಥ್ರಿನ್ 2.8 ಪ್ರತಿ ಹೆಕ್ಟೇರ್ ಗೆ 450 ಎಂ.ಎಲ್, ಕೀಟನಾಶಕ ಫಿಪ್ರೋನಿಲ್ 5% ಎಸ್.ಸಿ ಪ್ರತಿ ಹೆಕ್ಟೇರ್ ಗೆ 125 ಎಂ.ಎಲ್, ಕೀಟನಾಶಕ ಫಿಪ್ರೋನಿಲ್ 2.8% ಇ.ಸಿ ಪ್ರತಿ ಹೆಕ್ಟೇರ್ ಗೆ 225 ಎಂ.ಎಲ್, ಕೀಟನಾಶ ಕಲಾಮ್ಡಾ ಸಹಲೋಥ್ರಿನ್ 5.0% ಇ.ಸಿ.ಪ್ರತಿಹೆಕ್ಟೇರ್ ಗೆ 400 ಎಂ.ಎಲ್, ಕೀಟನಾಶ ಕಲಾಮ್ಡಾ ಸಹಲೋಥ್ರಿನ್ 10.0%  ಡಬ್ಲ್ಯೂಪಿ ಪ್ರತಿ ಹೆಕ್ಟೇರ್ ಗೆ 200 ಗ್ರಾಂ, ಕೀಟನಾಶಕ ಮಲಾಥಿಯಾನ್ 50% ಇ.ಸಿ.ಪ್ರತಿ ಹೆಕ್ಟೇರ್‍ ಗೆ 1.85 ಲೀ, ಕೀಟನಾಶಕ ಮಲಾಥಿಯಾನ್ 25% ಡಬ್ಲ್ಯೂಪಿ ಪ್ರತಿ ಹೆಕ್ಟೇರ್‍ ಗೆ 3.7 ಕಿ.ಗ್ರಾಂ ಕೀಟನಾಶಕಗಳನ್ನು ಬಳಸಿ ಹತೋಟಿ ಮಾಡಬಹುದು ಎಂದು ಪ್ರಕಟಣೆ ತಿಳಿಸುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

6 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

6 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

7 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

7 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

13 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

14 hours ago