Advertisement
ಕೃಷಿ

ಮಿಡತೆ ಹಾವಳಿ – ರೈತರಿಗೆ ಇಲಾಖೆಗಳಿಂದ ಸಲಹೆ

Share

 

Advertisement

ಮಿಡತೆ ದಾಳಿ ಬಗ್ಗೆ ಕೃಷಿ ಇಲಾಖೆ ಹೀಗೆ ಸಲಹೆ ನೀಡುತ್ತದೆ….

ಮಿಡತೆ ಕೀಟ ಹಾವಳಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ  ಕಾಣಿಸಿಕೊಂಡಿರುತ್ತದೆ ಹಾಗೂ ಕಾಣಿಸಿಕೊಂಡ ಮಿಡತೆಗಳು ಮರುಭೂವಿಯಲ್ಲಿ ಕಂಡುಬಂದ ಮಿಡತೆಗಳು ಆಗಿರುವುದಿಲ್ಲ. ಮಿಡತೆಗಳು ಬೆಳೆಗೆ ಹಾನಿ ಮಾಡಿದಲ್ಲಿ ಅವುಗಳ ನಿಯಂತ್ರಣಕ್ಕಾಗಿ,  ಕೀಟವು ಬೆಳೆಗಳಲ್ಲಿ ಕಂಡುಬಂದಲ್ಲಿ, ಡ್ರಮ್‍ ಅಥವಾ ಪಾತ್ರೆ ಅಥವಾ ಫಲಕಗಳನ್ನು ಬಡಿಯುವುದರ ಮೂಲಕ ಹೆಚ್ಚಾಗಿ ಶಬ್ದವನ್ನು ಮಾಡಿ ಮಿಡತೆ ಸಮೂಹವನ್ನು ಇತರೆಡೆಗೆ ಓಡಿಸಬಹುದು.

ಬೇವಿನ ಮೂಲದ ಕೀಟನಾಶಕಗಳನ್ನು (0.15% ಇ.ಸಿ @3ಎಂ.ಎಲ್/ಲೀ) ಬೆಳೆಗಳಲ್ಲಿ ಸಿಂಪಡಿಸುವುದರಿಂದ ಕೀಟವು ಬೆಳೆ ಹಾನಿ ಮಾಡುವುದು ಕಡಿಮೆಯಾಗುತ್ತದೆ. ಕೀಟ ಬಾಧಿತ ಪ್ರದೇಶದಲ್ಲಿ ಹೊಗೆ ಮತ್ತು ಬೆಂಕಿಯನ್ನು ಹಾಕುವುದರಿಂದ ಕೀಟವನ್ನು ಬೇರೆಡೆಗೆ ಓಡಿಸಬಹುದು.

ಕೀಟವು ಮರಿಹುಳುವಾಗಿದ್ದಲ್ಲಿ ಬಾಧಿತ ಪ್ರದೇಶ ಕನಿಷ್ಟ 2 ಅಡಿ ಆಳ ಮತ್ತು 3 ಅಡಿ ಅಗಲದ ಗುಂಡಿಗಳನ್ನು ನಿರ್ಮಿಸಿ ಮರಿಹುಳುಗಳನ್ನು ಸೆರೆ ಹಿಡಿದು ನಾಶಪಡಿಸಬಹುದು. ಮಿಡತೆ ಹಗಲಿನಲ್ಲಿ ಚಲಿಸಿ ರಾತ್ರಿ ವೇಳೆ ಮರಗಿಡಗಳ ಮೇಲೆ ಆಶ್ರಯ ಪಡೆಯುವುದರಿಂದ ಟ್ರ್ಯಾಕ್ಟರ್ ಮೌಂಟೆಡ್‍ ಜೆಟ್ ಸ್ಪ್ರೇಯರ್ಗಳ ಮೂಲಕ ಕೀಟನಾಶಕಗಳನ್ನು ಸಿಂಪಡಿಸಬಹುದು.ಆದರೆ ಈ ಕೀಟನಾಶಕಗಳನ್ನು ಜಲಮೂಲಗಳ ಸಮೀಪ ಸಿಂಪಡಿಸದಂತೆ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ.

ಬೆಳೆಯ ಅಥವಾ ಮರಗಳ ಮೇಲೆ ಮರುಭೂಮಿ ಮಿಡತೆ ಕಂಡುಬಂದಲ್ಲಿ ಕೀಟನಾಶಕ ಕ್ಲೊರೋಪೈರಿಪಾಸ್ 20%  ಪ್ರತೀ ಹೆಕ್ಟರ್ ಗೆ 1.2 ಲೀ, ಕೀಟನಾಶಕ ಕ್ಲೊರೋಪೈರಿಪಾಸ್ 50%  ಪ್ರತೀ ಹೆಕ್ಟರ್ ಗೆ 480 ಎಂ.ಎಲ್, ಕೀಟನಾಶ ಕಡೆಲ್ಟಮೆಥ್ರಿನ್ 2.8 ಪ್ರತಿ ಹೆಕ್ಟೇರ್ ಗೆ 450 ಎಂ.ಎಲ್, ಕೀಟನಾಶಕ ಫಿಪ್ರೋನಿಲ್ 5% ಎಸ್.ಸಿ ಪ್ರತಿ ಹೆಕ್ಟೇರ್ ಗೆ 125 ಎಂ.ಎಲ್, ಕೀಟನಾಶಕ ಫಿಪ್ರೋನಿಲ್ 2.8% ಇ.ಸಿ ಪ್ರತಿ ಹೆಕ್ಟೇರ್ ಗೆ 225 ಎಂ.ಎಲ್, ಕೀಟನಾಶ ಕಲಾಮ್ಡಾ ಸಹಲೋಥ್ರಿನ್ 5.0% ಇ.ಸಿ.ಪ್ರತಿಹೆಕ್ಟೇರ್ ಗೆ 400 ಎಂ.ಎಲ್, ಕೀಟನಾಶ ಕಲಾಮ್ಡಾ ಸಹಲೋಥ್ರಿನ್ 10.0%  ಡಬ್ಲ್ಯೂಪಿ ಪ್ರತಿ ಹೆಕ್ಟೇರ್ ಗೆ 200 ಗ್ರಾಂ, ಕೀಟನಾಶಕ ಮಲಾಥಿಯಾನ್ 50% ಇ.ಸಿ.ಪ್ರತಿ ಹೆಕ್ಟೇರ್‍ ಗೆ 1.85 ಲೀ, ಕೀಟನಾಶಕ ಮಲಾಥಿಯಾನ್ 25% ಡಬ್ಲ್ಯೂಪಿ ಪ್ರತಿ ಹೆಕ್ಟೇರ್‍ ಗೆ 3.7 ಕಿ.ಗ್ರಾಂ ಕೀಟನಾಶಕಗಳನ್ನು ಬಳಸಿ ಹತೋಟಿ ಮಾಡಬಹುದು ಎಂದು ಪ್ರಕಟಣೆ ತಿಳಿಸುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

39 minutes ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

14 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

14 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

23 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

23 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

1 day ago