ಅನುಕ್ರಮ

ಮಿಣಿ ಮಿಣಿ ಮಿನುಗುವ ಮಿಂಚುಹುಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆಗಾಲದಲ್ಲಿ ಆಗಸದಲ್ಲಿ ಮಿನುಗುವ ಬೆಳ್ಳಿ ಚುಕ್ಕಿಗಳಿಗೆ ಕಾರ್ಮೋಡದ ಪರದೆ.ಇದೇ ಸಮಯದಲ್ಲಿಗದ್ದೆ, ತೋಟ, ಕಾಡುಒಟ್ಟಾರೆ ಹೇಳುವುದರಾದರೆ ಪ್ರಕೃತಿಯ ಮಡಿಲಿನ ಕಡೆಗೆ ಹೋದರೆ ಕಾರ್ಮೋಡವನ್ನು ಸೀಳಿ ಧರೆಯತ್ತ ನಕ್ಷತ್ರಗಳು ಧಾವಿಸಿ ಬಂದಿವೆಯೋ ಏನೋ ಎಂದು ಭಾಸವಾಗುವುದು ನಿಜ. ಇದಕ್ಕೆಕಾರಣ ಹೊಳೆಯುವ ಬೆಳಕನ್ನು ಚೆಲ್ಲುತ್ತಾ ಹಾರುವ ಬೀಟಲ್‍ಜಾತಿಗೆ ಸೇರಿದ ಮಿಂಚುಹುಳಗಳು.

Advertisement
Advertisement

ಪ್ರಕೃತಿಯ ಚಮತ್ಕಾರಗಳಲ್ಲೊಂದಾದ ಈ ಕೀಟದ ಸುಂದರತೆಯನ್ನುಆಹ್ಲಾದಿಸುವ ಮನಸ್ಸಿದ್ದರೆ ಕತ್ತಲಲ್ಲಿ ಕಾಣುವ ಮಿಂಚುಹುಳದ ಈ ಬೆಳಕಿನಾಟ ಮನಕ್ಕೆ ತಂಪೆರೆಯವುದಂತು ನಿಜ. ಮಾನವಜಗತ್ತು ಎಷ್ಟೇ ವಿನೂತನ ಆವಿಷ್ಕಾರ ಮಾಡಿದರೂ ಪ್ರಕೃತಿಯ ಮಡಿಲಿನಲ್ಲಿರುವಇಂತಹಜೀವ ಸಂಕುಲಗಳಿಂದಾಗಿ ದೇವರ ಸೃಷ್ಟಿಗೆತಲೆಬಾಗಲೇ ಬೇಕು.

ಮಿಂಚುಹುಳಗಳ ದೇಹದ ಹಿಂಭಾಗದಲ್ಲಿರುವ ವಿಶಿಷ್ಟ ಕೋಶಗಳಲ್ಲಿರುವ ಪ್ರೋಟೀನ್ ಹಾಗು ಅಣುಗಳಿಂದಾಗಿ ಅಪರೂಪದ ಬೆಳಕು ಉತ್ಪತ್ತಿಯಾಗುತ್ತವೆ. ತಮ್ಮ ಶರೀರದಲ್ಲಿ ಬಿಡುಗಡೆಯಾಗುವ ಈ ಬೆಳಕಿನ ಮೂಲಕವೇ ತಮ್ಮ ಸಂಗಾತಿಯನ್ನು ಸೆಳೆಯುತ್ತವೆ. ತನ್ನ ವಾಸಸ್ಥಳಗಳನ್ನು ಗುರುತಿಸಲು ಹಾಗು ಬೇಟೆಯನ್ನು ಹಿಡಿಯಲು ಮಿಂಚುಹುಳಗಳು ತಮ್ಮಿಂದ ಹೊರಸೂಸುವ ಈ ಬೆಳಕನ್ನು ಬಳಸುತ್ತವೆ.
ಸೂರ್ಯಕಿರಣದ ಬೆಳಕು, ಉರಿಯುವ ಕಟ್ಟಿಗೆ ಅಥವಾ ಮಾನವಜಗತ್ತು ಆವಿಷ್ಕರಿಸಿದ ವಿಧ್ಯುತ್‍ಆಧಾರಿತ ಬೆಳಕು ಎಂದರೆ ನಮ್ಮ ಮನಸ್ಸಿಗೆ ಮೊದಲು ನೆನಪಾಗುವುದು ಶಾಖ.ಆದರೆ ವಿಚಿತ್ರಎಂದರೆ ಮಿಂಚು ಹುಳಗಳು ಮಾತ್ರತಮ್ಮ ಈ ಬೆಳಕಲ್ಲಿ ಶೂನ್ಯ ಶಾಖವನ್ನುಅಂದರೆ ಬಿಸಿಯಿಲ್ಲದ ಬೆಳಕನ್ನು ಹೊರಸೂಸುತ್ತವೆ. ಇದಕ್ಕೆತಣ್ಣನೆಯ ಬೆಳಕು ಎಂದುಕರೆಯುತ್ತಾರೆ.ಅಂದ ಹಾಗೆ ಮಿಂಚು ಹುಳಗಳು ತಮಗೆಅತೀ ಹೆಚ್ಚು ಆಹಾರ ಸಿಗುವಂತಹ ಗಿಡಮರಗಳಿಂದ ಕೂಡಿದತಂಪಾದ ವಾತಾವರಣದಲ್ಲಿಕಂಡುಬರುತ್ತವೆ.

ಜಗತ್ತಿನ ಯಾವುದೇ ಜೀವಿಯ ಜೀವನಕ್ರಮವನ್ನುಆಸಕ್ತಿಯಿಂದ ಗಮನಿಸಿದರೆ ಹಲವಾರು ಅಚ್ಚರಿಗಳು ಅದರಲ್ಲಿಅಡಗಿರುತ್ತವೆ. ಸಂಶೋಧಿಸಿದಷ್ಟೂ ಹೊಸ ವಿಷಯಗಳು ತೆರೆದುಕೊಳ್ಳುತ್ತವೆ. ಮಾನವನೇ ಬುದ್ದಿವಂತಜೀವಿ ಎಂದು ಅಹಂನಿಂದ ಬದುಕದೇ ಮನಸ್ಸಿಗೆ ಮುದ ನೀಡುವ ಇಂತಹಜೀವ ಸಂಕುಲಗಳನ್ನೂ ಸ್ವಚ್ಛಂದವಾಗಿದೇವರ ಸೃಷ್ಟಿಯ ಈ ವಿಶ್ವದಲ್ಲಿ ಅವುಗಳಿಷ್ಟದಂತೆ ಬದುಕಲು ಅವಕಾಶ ಕೊಡುವುದುಎಲ್ಲಾಧೃಷ್ಟಿಕೋನದಿಂದಲೂ ಒಳ್ಳೆಯದು. ಏನಂತೀರಿ..?

# ವಂದನಾರವಿ ಕೆ.ವೈ. ವೇಣೂರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

1 hour ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

10 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

11 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

11 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

11 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

11 hours ago