Advertisement
ಅನುಕ್ರಮ

ಮಿಣಿ ಮಿಣಿ ಮಿನುಗುವ ಮಿಂಚುಹುಳ

Share

ಮಳೆಗಾಲದಲ್ಲಿ ಆಗಸದಲ್ಲಿ ಮಿನುಗುವ ಬೆಳ್ಳಿ ಚುಕ್ಕಿಗಳಿಗೆ ಕಾರ್ಮೋಡದ ಪರದೆ.ಇದೇ ಸಮಯದಲ್ಲಿಗದ್ದೆ, ತೋಟ, ಕಾಡುಒಟ್ಟಾರೆ ಹೇಳುವುದರಾದರೆ ಪ್ರಕೃತಿಯ ಮಡಿಲಿನ ಕಡೆಗೆ ಹೋದರೆ ಕಾರ್ಮೋಡವನ್ನು ಸೀಳಿ ಧರೆಯತ್ತ ನಕ್ಷತ್ರಗಳು ಧಾವಿಸಿ ಬಂದಿವೆಯೋ ಏನೋ ಎಂದು ಭಾಸವಾಗುವುದು ನಿಜ. ಇದಕ್ಕೆಕಾರಣ ಹೊಳೆಯುವ ಬೆಳಕನ್ನು ಚೆಲ್ಲುತ್ತಾ ಹಾರುವ ಬೀಟಲ್‍ಜಾತಿಗೆ ಸೇರಿದ ಮಿಂಚುಹುಳಗಳು.

Advertisement

ಪ್ರಕೃತಿಯ ಚಮತ್ಕಾರಗಳಲ್ಲೊಂದಾದ ಈ ಕೀಟದ ಸುಂದರತೆಯನ್ನುಆಹ್ಲಾದಿಸುವ ಮನಸ್ಸಿದ್ದರೆ ಕತ್ತಲಲ್ಲಿ ಕಾಣುವ ಮಿಂಚುಹುಳದ ಈ ಬೆಳಕಿನಾಟ ಮನಕ್ಕೆ ತಂಪೆರೆಯವುದಂತು ನಿಜ. ಮಾನವಜಗತ್ತು ಎಷ್ಟೇ ವಿನೂತನ ಆವಿಷ್ಕಾರ ಮಾಡಿದರೂ ಪ್ರಕೃತಿಯ ಮಡಿಲಿನಲ್ಲಿರುವಇಂತಹಜೀವ ಸಂಕುಲಗಳಿಂದಾಗಿ ದೇವರ ಸೃಷ್ಟಿಗೆತಲೆಬಾಗಲೇ ಬೇಕು.

ಮಿಂಚುಹುಳಗಳ ದೇಹದ ಹಿಂಭಾಗದಲ್ಲಿರುವ ವಿಶಿಷ್ಟ ಕೋಶಗಳಲ್ಲಿರುವ ಪ್ರೋಟೀನ್ ಹಾಗು ಅಣುಗಳಿಂದಾಗಿ ಅಪರೂಪದ ಬೆಳಕು ಉತ್ಪತ್ತಿಯಾಗುತ್ತವೆ. ತಮ್ಮ ಶರೀರದಲ್ಲಿ ಬಿಡುಗಡೆಯಾಗುವ ಈ ಬೆಳಕಿನ ಮೂಲಕವೇ ತಮ್ಮ ಸಂಗಾತಿಯನ್ನು ಸೆಳೆಯುತ್ತವೆ. ತನ್ನ ವಾಸಸ್ಥಳಗಳನ್ನು ಗುರುತಿಸಲು ಹಾಗು ಬೇಟೆಯನ್ನು ಹಿಡಿಯಲು ಮಿಂಚುಹುಳಗಳು ತಮ್ಮಿಂದ ಹೊರಸೂಸುವ ಈ ಬೆಳಕನ್ನು ಬಳಸುತ್ತವೆ.
ಸೂರ್ಯಕಿರಣದ ಬೆಳಕು, ಉರಿಯುವ ಕಟ್ಟಿಗೆ ಅಥವಾ ಮಾನವಜಗತ್ತು ಆವಿಷ್ಕರಿಸಿದ ವಿಧ್ಯುತ್‍ಆಧಾರಿತ ಬೆಳಕು ಎಂದರೆ ನಮ್ಮ ಮನಸ್ಸಿಗೆ ಮೊದಲು ನೆನಪಾಗುವುದು ಶಾಖ.ಆದರೆ ವಿಚಿತ್ರಎಂದರೆ ಮಿಂಚು ಹುಳಗಳು ಮಾತ್ರತಮ್ಮ ಈ ಬೆಳಕಲ್ಲಿ ಶೂನ್ಯ ಶಾಖವನ್ನುಅಂದರೆ ಬಿಸಿಯಿಲ್ಲದ ಬೆಳಕನ್ನು ಹೊರಸೂಸುತ್ತವೆ. ಇದಕ್ಕೆತಣ್ಣನೆಯ ಬೆಳಕು ಎಂದುಕರೆಯುತ್ತಾರೆ.ಅಂದ ಹಾಗೆ ಮಿಂಚು ಹುಳಗಳು ತಮಗೆಅತೀ ಹೆಚ್ಚು ಆಹಾರ ಸಿಗುವಂತಹ ಗಿಡಮರಗಳಿಂದ ಕೂಡಿದತಂಪಾದ ವಾತಾವರಣದಲ್ಲಿಕಂಡುಬರುತ್ತವೆ.

ಜಗತ್ತಿನ ಯಾವುದೇ ಜೀವಿಯ ಜೀವನಕ್ರಮವನ್ನುಆಸಕ್ತಿಯಿಂದ ಗಮನಿಸಿದರೆ ಹಲವಾರು ಅಚ್ಚರಿಗಳು ಅದರಲ್ಲಿಅಡಗಿರುತ್ತವೆ. ಸಂಶೋಧಿಸಿದಷ್ಟೂ ಹೊಸ ವಿಷಯಗಳು ತೆರೆದುಕೊಳ್ಳುತ್ತವೆ. ಮಾನವನೇ ಬುದ್ದಿವಂತಜೀವಿ ಎಂದು ಅಹಂನಿಂದ ಬದುಕದೇ ಮನಸ್ಸಿಗೆ ಮುದ ನೀಡುವ ಇಂತಹಜೀವ ಸಂಕುಲಗಳನ್ನೂ ಸ್ವಚ್ಛಂದವಾಗಿದೇವರ ಸೃಷ್ಟಿಯ ಈ ವಿಶ್ವದಲ್ಲಿ ಅವುಗಳಿಷ್ಟದಂತೆ ಬದುಕಲು ಅವಕಾಶ ಕೊಡುವುದುಎಲ್ಲಾಧೃಷ್ಟಿಕೋನದಿಂದಲೂ ಒಳ್ಳೆಯದು. ಏನಂತೀರಿ..?

# ವಂದನಾರವಿ ಕೆ.ವೈ. ವೇಣೂರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

9 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago