Advertisement
ಅನುಕ್ರಮ

ಮಿಣಿ ಮಿಣಿ ಮಿನುಗುವ ಮಿಂಚುಹುಳ

Share

ಮಳೆಗಾಲದಲ್ಲಿ ಆಗಸದಲ್ಲಿ ಮಿನುಗುವ ಬೆಳ್ಳಿ ಚುಕ್ಕಿಗಳಿಗೆ ಕಾರ್ಮೋಡದ ಪರದೆ.ಇದೇ ಸಮಯದಲ್ಲಿಗದ್ದೆ, ತೋಟ, ಕಾಡುಒಟ್ಟಾರೆ ಹೇಳುವುದರಾದರೆ ಪ್ರಕೃತಿಯ ಮಡಿಲಿನ ಕಡೆಗೆ ಹೋದರೆ ಕಾರ್ಮೋಡವನ್ನು ಸೀಳಿ ಧರೆಯತ್ತ ನಕ್ಷತ್ರಗಳು ಧಾವಿಸಿ ಬಂದಿವೆಯೋ ಏನೋ ಎಂದು ಭಾಸವಾಗುವುದು ನಿಜ. ಇದಕ್ಕೆಕಾರಣ ಹೊಳೆಯುವ ಬೆಳಕನ್ನು ಚೆಲ್ಲುತ್ತಾ ಹಾರುವ ಬೀಟಲ್‍ಜಾತಿಗೆ ಸೇರಿದ ಮಿಂಚುಹುಳಗಳು.

ಪ್ರಕೃತಿಯ ಚಮತ್ಕಾರಗಳಲ್ಲೊಂದಾದ ಈ ಕೀಟದ ಸುಂದರತೆಯನ್ನುಆಹ್ಲಾದಿಸುವ ಮನಸ್ಸಿದ್ದರೆ ಕತ್ತಲಲ್ಲಿ ಕಾಣುವ ಮಿಂಚುಹುಳದ ಈ ಬೆಳಕಿನಾಟ ಮನಕ್ಕೆ ತಂಪೆರೆಯವುದಂತು ನಿಜ. ಮಾನವಜಗತ್ತು ಎಷ್ಟೇ ವಿನೂತನ ಆವಿಷ್ಕಾರ ಮಾಡಿದರೂ ಪ್ರಕೃತಿಯ ಮಡಿಲಿನಲ್ಲಿರುವಇಂತಹಜೀವ ಸಂಕುಲಗಳಿಂದಾಗಿ ದೇವರ ಸೃಷ್ಟಿಗೆತಲೆಬಾಗಲೇ ಬೇಕು.

ಮಿಂಚುಹುಳಗಳ ದೇಹದ ಹಿಂಭಾಗದಲ್ಲಿರುವ ವಿಶಿಷ್ಟ ಕೋಶಗಳಲ್ಲಿರುವ ಪ್ರೋಟೀನ್ ಹಾಗು ಅಣುಗಳಿಂದಾಗಿ ಅಪರೂಪದ ಬೆಳಕು ಉತ್ಪತ್ತಿಯಾಗುತ್ತವೆ. ತಮ್ಮ ಶರೀರದಲ್ಲಿ ಬಿಡುಗಡೆಯಾಗುವ ಈ ಬೆಳಕಿನ ಮೂಲಕವೇ ತಮ್ಮ ಸಂಗಾತಿಯನ್ನು ಸೆಳೆಯುತ್ತವೆ. ತನ್ನ ವಾಸಸ್ಥಳಗಳನ್ನು ಗುರುತಿಸಲು ಹಾಗು ಬೇಟೆಯನ್ನು ಹಿಡಿಯಲು ಮಿಂಚುಹುಳಗಳು ತಮ್ಮಿಂದ ಹೊರಸೂಸುವ ಈ ಬೆಳಕನ್ನು ಬಳಸುತ್ತವೆ.
ಸೂರ್ಯಕಿರಣದ ಬೆಳಕು, ಉರಿಯುವ ಕಟ್ಟಿಗೆ ಅಥವಾ ಮಾನವಜಗತ್ತು ಆವಿಷ್ಕರಿಸಿದ ವಿಧ್ಯುತ್‍ಆಧಾರಿತ ಬೆಳಕು ಎಂದರೆ ನಮ್ಮ ಮನಸ್ಸಿಗೆ ಮೊದಲು ನೆನಪಾಗುವುದು ಶಾಖ.ಆದರೆ ವಿಚಿತ್ರಎಂದರೆ ಮಿಂಚು ಹುಳಗಳು ಮಾತ್ರತಮ್ಮ ಈ ಬೆಳಕಲ್ಲಿ ಶೂನ್ಯ ಶಾಖವನ್ನುಅಂದರೆ ಬಿಸಿಯಿಲ್ಲದ ಬೆಳಕನ್ನು ಹೊರಸೂಸುತ್ತವೆ. ಇದಕ್ಕೆತಣ್ಣನೆಯ ಬೆಳಕು ಎಂದುಕರೆಯುತ್ತಾರೆ.ಅಂದ ಹಾಗೆ ಮಿಂಚು ಹುಳಗಳು ತಮಗೆಅತೀ ಹೆಚ್ಚು ಆಹಾರ ಸಿಗುವಂತಹ ಗಿಡಮರಗಳಿಂದ ಕೂಡಿದತಂಪಾದ ವಾತಾವರಣದಲ್ಲಿಕಂಡುಬರುತ್ತವೆ.

ಜಗತ್ತಿನ ಯಾವುದೇ ಜೀವಿಯ ಜೀವನಕ್ರಮವನ್ನುಆಸಕ್ತಿಯಿಂದ ಗಮನಿಸಿದರೆ ಹಲವಾರು ಅಚ್ಚರಿಗಳು ಅದರಲ್ಲಿಅಡಗಿರುತ್ತವೆ. ಸಂಶೋಧಿಸಿದಷ್ಟೂ ಹೊಸ ವಿಷಯಗಳು ತೆರೆದುಕೊಳ್ಳುತ್ತವೆ. ಮಾನವನೇ ಬುದ್ದಿವಂತಜೀವಿ ಎಂದು ಅಹಂನಿಂದ ಬದುಕದೇ ಮನಸ್ಸಿಗೆ ಮುದ ನೀಡುವ ಇಂತಹಜೀವ ಸಂಕುಲಗಳನ್ನೂ ಸ್ವಚ್ಛಂದವಾಗಿದೇವರ ಸೃಷ್ಟಿಯ ಈ ವಿಶ್ವದಲ್ಲಿ ಅವುಗಳಿಷ್ಟದಂತೆ ಬದುಕಲು ಅವಕಾಶ ಕೊಡುವುದುಎಲ್ಲಾಧೃಷ್ಟಿಕೋನದಿಂದಲೂ ಒಳ್ಳೆಯದು. ಏನಂತೀರಿ..?

# ವಂದನಾರವಿ ಕೆ.ವೈ. ವೇಣೂರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

3 minutes ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

31 minutes ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

4 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

5 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

15 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

16 hours ago