ಸುಬ್ರಹ್ಮಣ್ಯ : ಶಿಕ್ಷಣವು ಇಂದು ಎಲ್ಲರಿಗೂ ಸಿಗುತ್ತಿದೆ. ಶಿಕ್ಷಣ ಎನ್ನುವುದು ಅಂಕ ಮತ್ತು ಉದ್ಯೋಗ ಪಡೆಯುವ ಏಕ ಉದ್ದೇಶ ಹೊಂದಿರಬಾರದು. ಜೀವನ ಪಾಠ ಅಗತ್ಯವಿದ್ದು ಅಂತಹ ಬೋಧನೆಗಳು ಮಕ್ಕಳಿಗೆ ದೊರಕಬೇಕು ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಷ ಹೇಳಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಡ್ಕ ಮರ್ಕಂಜ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಮಠದಿಂದ ನೀಡಲಾದ ಉಚಿತ ಪುಸ್ತಕವನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಇರುವ ಪ್ರತಿಭೆಗಳನ್ನು ಗುರುತಿಸಿ ಅದೇ ಶಿಕ್ಷಣಕ್ಕೆ ಪ್ರೋತ್ಸಾಹ ಕೊಟ್ಟಾಗ ಅದು ಅವರ ಬದುಕಿಗೆ ಉತ್ತಮ ಪರಿಣಾಮಗಳನ್ನು ತಂದುಕೊಡುತ್ತದೆ ಎಂದವರು ಹೇಳಿದರು. ವಿದ್ಯಾರ್ಥಿಗಳು ಹಾಗೂ ಪೋಷಕರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಹರೀಶ್ ಹಲ್ದಡ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಬರಹ ಪುಸ್ತಕ ಕೊಡುಗೆ ನೀಡಿದ ಸುದರ್ಶನ ಜೋಯಿಷ ಅವರನ್ನು ಶಾಲಾಭಿವೃದ್ಧಿ ಸಮಿತಿ ಹಾಗೂ ಸಂಸ್ಥೆಯಿಂದ ಸಮ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಗ್ರಾ.ಪಂ ಸದಸ್ಯೆ ನಮಿನ ಮಿತ್ತಡ್ಕ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷತೆ ಜಯಂತಿ ಹೈದಂಗೂರು, ಮುಖ್ಯ ಶಿಕ್ಷಕಿ ಹೇಮಾವತಿ, ಪೋಷಕ ಪ್ರತಿನಿಧಿ ನಿತ್ಯಾನಂದ ಭೀಮಗುಳಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…