ಪ್ರಥಮ ಬಹುಮಾನ
ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಮಿತ್ರ ಬಳಗ ಕಾಯರ್ತೋಡಿ ವತಿಯಿಂದ ಬಲಿಯೇಂದ್ರ ಅಲಂಕಾರ ಸ್ಪರ್ಧೆ ಏರ್ಪಡಿಸಲಾಯಿತು. ಮನೆಯ ಮುಂಭಾಗದಲ್ಲಿ ಬಲಿಯೇಂದ್ರ ಹಾಕಿ ಪೂಜೆ ನಡೆಸುವುದು ದೀಪಾವಳಿ ಹಬ್ಬದ ಪ್ರಮುಖ ಆಚರಣೆಗಳಲ್ಲೊಂದು. ಮನೆಯ ಮುಂಭಾಗದಲ್ಲಿ ಹಾಕುವ ಬಲಿಯೇಂದ್ರವನ್ನು ಹೂವು, ಕಾಯಿ, ಬಳ್ಳಿ ಮತ್ತಿತರ ವಸ್ತುಗಳಿಂದ ಮನಮೋಹಕವಾಗಿ ಅಲಂಕರಿಸಲಾಗುತ್ತದೆ. ಅತ್ಯಂತ ಆಕರ್ಷಕವಾಗಿ ಅಲಂಕರಿಸಿದ ಬಲಿಯೇಂದ್ರಕ್ಕೆ ಬಹುಮಾನ ನೀಡಲಾಗುತ್ತದೆ.
ಮಿತ್ರ ಬಳಗದ ಸದಸ್ಯರು ಮನೆ ಮನೆ ತೆರಳಿ ಬಲಿಯೇಂದ್ರಕ್ಕೆ ಅಂಕ ನೀಡುತ್ತಾರೆ. ಅತೀ ಹೆಚ್ಚು ಅಂಕ ಗಳಿಸಿದ ಬಲಿಯೇಂದ್ರವನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗುತ್ತದೆ.
ಆಕರ್ಷಕವಾಗಿ ಅಲಂಕರಿಸಿದ ಗೋವಿಂದ ನಾಯ್ಕ ದುಗಲಡ್ಕ ಇವರ ಮನೆಯ ಬಲಿಯೇಂದ್ರ ಪ್ರಥಮ ಬಹುಮಾನ ಪಡೆದುಕೊಂಡಿತು.
ಪುಷ್ಪಾವತಿ ಆಚಾರ್ಯ ಮತ್ತು ಮನೆಯವರ ಬಲಿಯೇಂದ್ರ ಎರಡನೇ ಬಹುಮಾನ ಮತ್ತು ಶಿವರಾಮ ನಾಯ್ಕ ನೆಲ್ಲಿಬಂಗಾರಡ್ಕ ಕೇರ್ಪಳ ಇವರ ಮನೆಯ ಬಲಿಯೇಂದ್ರ ತೃತೀಯ ಸ್ಥಾನ ಪಡೆದಿದೆ ಎಂದು ಮಿತ್ರ ಬಳಗದ ಪದಾಧಿಕಾರಿಗಳು ತಿಳಿಸಿದ್ದಾರೆ.
ಮಿತ್ರ ಬಳಗದ ವತಿಯಿಂದ ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಲಿಯೇಂದ್ರ ಅಲಂಕಾರ ಸ್ಪರ್ಧೆ, ಗೂಡು ದೀಪ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ.
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.