ಪ್ರಥಮ ಬಹುಮಾನ
ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಮಿತ್ರ ಬಳಗ ಕಾಯರ್ತೋಡಿ ವತಿಯಿಂದ ಬಲಿಯೇಂದ್ರ ಅಲಂಕಾರ ಸ್ಪರ್ಧೆ ಏರ್ಪಡಿಸಲಾಯಿತು. ಮನೆಯ ಮುಂಭಾಗದಲ್ಲಿ ಬಲಿಯೇಂದ್ರ ಹಾಕಿ ಪೂಜೆ ನಡೆಸುವುದು ದೀಪಾವಳಿ ಹಬ್ಬದ ಪ್ರಮುಖ ಆಚರಣೆಗಳಲ್ಲೊಂದು. ಮನೆಯ ಮುಂಭಾಗದಲ್ಲಿ ಹಾಕುವ ಬಲಿಯೇಂದ್ರವನ್ನು ಹೂವು, ಕಾಯಿ, ಬಳ್ಳಿ ಮತ್ತಿತರ ವಸ್ತುಗಳಿಂದ ಮನಮೋಹಕವಾಗಿ ಅಲಂಕರಿಸಲಾಗುತ್ತದೆ. ಅತ್ಯಂತ ಆಕರ್ಷಕವಾಗಿ ಅಲಂಕರಿಸಿದ ಬಲಿಯೇಂದ್ರಕ್ಕೆ ಬಹುಮಾನ ನೀಡಲಾಗುತ್ತದೆ.
ಮಿತ್ರ ಬಳಗದ ಸದಸ್ಯರು ಮನೆ ಮನೆ ತೆರಳಿ ಬಲಿಯೇಂದ್ರಕ್ಕೆ ಅಂಕ ನೀಡುತ್ತಾರೆ. ಅತೀ ಹೆಚ್ಚು ಅಂಕ ಗಳಿಸಿದ ಬಲಿಯೇಂದ್ರವನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗುತ್ತದೆ.
ಆಕರ್ಷಕವಾಗಿ ಅಲಂಕರಿಸಿದ ಗೋವಿಂದ ನಾಯ್ಕ ದುಗಲಡ್ಕ ಇವರ ಮನೆಯ ಬಲಿಯೇಂದ್ರ ಪ್ರಥಮ ಬಹುಮಾನ ಪಡೆದುಕೊಂಡಿತು.
ಪುಷ್ಪಾವತಿ ಆಚಾರ್ಯ ಮತ್ತು ಮನೆಯವರ ಬಲಿಯೇಂದ್ರ ಎರಡನೇ ಬಹುಮಾನ ಮತ್ತು ಶಿವರಾಮ ನಾಯ್ಕ ನೆಲ್ಲಿಬಂಗಾರಡ್ಕ ಕೇರ್ಪಳ ಇವರ ಮನೆಯ ಬಲಿಯೇಂದ್ರ ತೃತೀಯ ಸ್ಥಾನ ಪಡೆದಿದೆ ಎಂದು ಮಿತ್ರ ಬಳಗದ ಪದಾಧಿಕಾರಿಗಳು ತಿಳಿಸಿದ್ದಾರೆ.
ಮಿತ್ರ ಬಳಗದ ವತಿಯಿಂದ ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಲಿಯೇಂದ್ರ ಅಲಂಕಾರ ಸ್ಪರ್ಧೆ, ಗೂಡು ದೀಪ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…