ಪ್ರಥಮ ಬಹುಮಾನ
ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಮಿತ್ರ ಬಳಗ ಕಾಯರ್ತೋಡಿ ವತಿಯಿಂದ ಬಲಿಯೇಂದ್ರ ಅಲಂಕಾರ ಸ್ಪರ್ಧೆ ಏರ್ಪಡಿಸಲಾಯಿತು. ಮನೆಯ ಮುಂಭಾಗದಲ್ಲಿ ಬಲಿಯೇಂದ್ರ ಹಾಕಿ ಪೂಜೆ ನಡೆಸುವುದು ದೀಪಾವಳಿ ಹಬ್ಬದ ಪ್ರಮುಖ ಆಚರಣೆಗಳಲ್ಲೊಂದು. ಮನೆಯ ಮುಂಭಾಗದಲ್ಲಿ ಹಾಕುವ ಬಲಿಯೇಂದ್ರವನ್ನು ಹೂವು, ಕಾಯಿ, ಬಳ್ಳಿ ಮತ್ತಿತರ ವಸ್ತುಗಳಿಂದ ಮನಮೋಹಕವಾಗಿ ಅಲಂಕರಿಸಲಾಗುತ್ತದೆ. ಅತ್ಯಂತ ಆಕರ್ಷಕವಾಗಿ ಅಲಂಕರಿಸಿದ ಬಲಿಯೇಂದ್ರಕ್ಕೆ ಬಹುಮಾನ ನೀಡಲಾಗುತ್ತದೆ.
ಮಿತ್ರ ಬಳಗದ ಸದಸ್ಯರು ಮನೆ ಮನೆ ತೆರಳಿ ಬಲಿಯೇಂದ್ರಕ್ಕೆ ಅಂಕ ನೀಡುತ್ತಾರೆ. ಅತೀ ಹೆಚ್ಚು ಅಂಕ ಗಳಿಸಿದ ಬಲಿಯೇಂದ್ರವನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗುತ್ತದೆ.
ಆಕರ್ಷಕವಾಗಿ ಅಲಂಕರಿಸಿದ ಗೋವಿಂದ ನಾಯ್ಕ ದುಗಲಡ್ಕ ಇವರ ಮನೆಯ ಬಲಿಯೇಂದ್ರ ಪ್ರಥಮ ಬಹುಮಾನ ಪಡೆದುಕೊಂಡಿತು.
ಪುಷ್ಪಾವತಿ ಆಚಾರ್ಯ ಮತ್ತು ಮನೆಯವರ ಬಲಿಯೇಂದ್ರ ಎರಡನೇ ಬಹುಮಾನ ಮತ್ತು ಶಿವರಾಮ ನಾಯ್ಕ ನೆಲ್ಲಿಬಂಗಾರಡ್ಕ ಕೇರ್ಪಳ ಇವರ ಮನೆಯ ಬಲಿಯೇಂದ್ರ ತೃತೀಯ ಸ್ಥಾನ ಪಡೆದಿದೆ ಎಂದು ಮಿತ್ರ ಬಳಗದ ಪದಾಧಿಕಾರಿಗಳು ತಿಳಿಸಿದ್ದಾರೆ.
ಮಿತ್ರ ಬಳಗದ ವತಿಯಿಂದ ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಲಿಯೇಂದ್ರ ಅಲಂಕಾರ ಸ್ಪರ್ಧೆ, ಗೂಡು ದೀಪ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…