ಪ್ರಥಮ ಬಹುಮಾನ
ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಮಿತ್ರ ಬಳಗ ಕಾಯರ್ತೋಡಿ ವತಿಯಿಂದ ಬಲಿಯೇಂದ್ರ ಅಲಂಕಾರ ಸ್ಪರ್ಧೆ ಏರ್ಪಡಿಸಲಾಯಿತು. ಮನೆಯ ಮುಂಭಾಗದಲ್ಲಿ ಬಲಿಯೇಂದ್ರ ಹಾಕಿ ಪೂಜೆ ನಡೆಸುವುದು ದೀಪಾವಳಿ ಹಬ್ಬದ ಪ್ರಮುಖ ಆಚರಣೆಗಳಲ್ಲೊಂದು. ಮನೆಯ ಮುಂಭಾಗದಲ್ಲಿ ಹಾಕುವ ಬಲಿಯೇಂದ್ರವನ್ನು ಹೂವು, ಕಾಯಿ, ಬಳ್ಳಿ ಮತ್ತಿತರ ವಸ್ತುಗಳಿಂದ ಮನಮೋಹಕವಾಗಿ ಅಲಂಕರಿಸಲಾಗುತ್ತದೆ. ಅತ್ಯಂತ ಆಕರ್ಷಕವಾಗಿ ಅಲಂಕರಿಸಿದ ಬಲಿಯೇಂದ್ರಕ್ಕೆ ಬಹುಮಾನ ನೀಡಲಾಗುತ್ತದೆ.
ಮಿತ್ರ ಬಳಗದ ಸದಸ್ಯರು ಮನೆ ಮನೆ ತೆರಳಿ ಬಲಿಯೇಂದ್ರಕ್ಕೆ ಅಂಕ ನೀಡುತ್ತಾರೆ. ಅತೀ ಹೆಚ್ಚು ಅಂಕ ಗಳಿಸಿದ ಬಲಿಯೇಂದ್ರವನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗುತ್ತದೆ.
ಆಕರ್ಷಕವಾಗಿ ಅಲಂಕರಿಸಿದ ಗೋವಿಂದ ನಾಯ್ಕ ದುಗಲಡ್ಕ ಇವರ ಮನೆಯ ಬಲಿಯೇಂದ್ರ ಪ್ರಥಮ ಬಹುಮಾನ ಪಡೆದುಕೊಂಡಿತು.
ಪುಷ್ಪಾವತಿ ಆಚಾರ್ಯ ಮತ್ತು ಮನೆಯವರ ಬಲಿಯೇಂದ್ರ ಎರಡನೇ ಬಹುಮಾನ ಮತ್ತು ಶಿವರಾಮ ನಾಯ್ಕ ನೆಲ್ಲಿಬಂಗಾರಡ್ಕ ಕೇರ್ಪಳ ಇವರ ಮನೆಯ ಬಲಿಯೇಂದ್ರ ತೃತೀಯ ಸ್ಥಾನ ಪಡೆದಿದೆ ಎಂದು ಮಿತ್ರ ಬಳಗದ ಪದಾಧಿಕಾರಿಗಳು ತಿಳಿಸಿದ್ದಾರೆ.
ಮಿತ್ರ ಬಳಗದ ವತಿಯಿಂದ ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಲಿಯೇಂದ್ರ ಅಲಂಕಾರ ಸ್ಪರ್ಧೆ, ಗೂಡು ದೀಪ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ.
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…