ಪ್ರಥಮ ಬಹುಮಾನ
ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಮಿತ್ರ ಬಳಗ ಕಾಯರ್ತೋಡಿ ವತಿಯಿಂದ ಬಲಿಯೇಂದ್ರ ಅಲಂಕಾರ ಸ್ಪರ್ಧೆ ಏರ್ಪಡಿಸಲಾಯಿತು. ಮನೆಯ ಮುಂಭಾಗದಲ್ಲಿ ಬಲಿಯೇಂದ್ರ ಹಾಕಿ ಪೂಜೆ ನಡೆಸುವುದು ದೀಪಾವಳಿ ಹಬ್ಬದ ಪ್ರಮುಖ ಆಚರಣೆಗಳಲ್ಲೊಂದು. ಮನೆಯ ಮುಂಭಾಗದಲ್ಲಿ ಹಾಕುವ ಬಲಿಯೇಂದ್ರವನ್ನು ಹೂವು, ಕಾಯಿ, ಬಳ್ಳಿ ಮತ್ತಿತರ ವಸ್ತುಗಳಿಂದ ಮನಮೋಹಕವಾಗಿ ಅಲಂಕರಿಸಲಾಗುತ್ತದೆ. ಅತ್ಯಂತ ಆಕರ್ಷಕವಾಗಿ ಅಲಂಕರಿಸಿದ ಬಲಿಯೇಂದ್ರಕ್ಕೆ ಬಹುಮಾನ ನೀಡಲಾಗುತ್ತದೆ.
ಮಿತ್ರ ಬಳಗದ ಸದಸ್ಯರು ಮನೆ ಮನೆ ತೆರಳಿ ಬಲಿಯೇಂದ್ರಕ್ಕೆ ಅಂಕ ನೀಡುತ್ತಾರೆ. ಅತೀ ಹೆಚ್ಚು ಅಂಕ ಗಳಿಸಿದ ಬಲಿಯೇಂದ್ರವನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗುತ್ತದೆ.
ಆಕರ್ಷಕವಾಗಿ ಅಲಂಕರಿಸಿದ ಗೋವಿಂದ ನಾಯ್ಕ ದುಗಲಡ್ಕ ಇವರ ಮನೆಯ ಬಲಿಯೇಂದ್ರ ಪ್ರಥಮ ಬಹುಮಾನ ಪಡೆದುಕೊಂಡಿತು.
ಪುಷ್ಪಾವತಿ ಆಚಾರ್ಯ ಮತ್ತು ಮನೆಯವರ ಬಲಿಯೇಂದ್ರ ಎರಡನೇ ಬಹುಮಾನ ಮತ್ತು ಶಿವರಾಮ ನಾಯ್ಕ ನೆಲ್ಲಿಬಂಗಾರಡ್ಕ ಕೇರ್ಪಳ ಇವರ ಮನೆಯ ಬಲಿಯೇಂದ್ರ ತೃತೀಯ ಸ್ಥಾನ ಪಡೆದಿದೆ ಎಂದು ಮಿತ್ರ ಬಳಗದ ಪದಾಧಿಕಾರಿಗಳು ತಿಳಿಸಿದ್ದಾರೆ.
ಮಿತ್ರ ಬಳಗದ ವತಿಯಿಂದ ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಲಿಯೇಂದ್ರ ಅಲಂಕಾರ ಸ್ಪರ್ಧೆ, ಗೂಡು ದೀಪ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…