ಪ್ರಥಮ ಬಹುಮಾನ
ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಮಿತ್ರ ಬಳಗ ಕಾಯರ್ತೋಡಿ ವತಿಯಿಂದ ಬಲಿಯೇಂದ್ರ ಅಲಂಕಾರ ಸ್ಪರ್ಧೆ ಏರ್ಪಡಿಸಲಾಯಿತು. ಮನೆಯ ಮುಂಭಾಗದಲ್ಲಿ ಬಲಿಯೇಂದ್ರ ಹಾಕಿ ಪೂಜೆ ನಡೆಸುವುದು ದೀಪಾವಳಿ ಹಬ್ಬದ ಪ್ರಮುಖ ಆಚರಣೆಗಳಲ್ಲೊಂದು. ಮನೆಯ ಮುಂಭಾಗದಲ್ಲಿ ಹಾಕುವ ಬಲಿಯೇಂದ್ರವನ್ನು ಹೂವು, ಕಾಯಿ, ಬಳ್ಳಿ ಮತ್ತಿತರ ವಸ್ತುಗಳಿಂದ ಮನಮೋಹಕವಾಗಿ ಅಲಂಕರಿಸಲಾಗುತ್ತದೆ. ಅತ್ಯಂತ ಆಕರ್ಷಕವಾಗಿ ಅಲಂಕರಿಸಿದ ಬಲಿಯೇಂದ್ರಕ್ಕೆ ಬಹುಮಾನ ನೀಡಲಾಗುತ್ತದೆ.
ಮಿತ್ರ ಬಳಗದ ಸದಸ್ಯರು ಮನೆ ಮನೆ ತೆರಳಿ ಬಲಿಯೇಂದ್ರಕ್ಕೆ ಅಂಕ ನೀಡುತ್ತಾರೆ. ಅತೀ ಹೆಚ್ಚು ಅಂಕ ಗಳಿಸಿದ ಬಲಿಯೇಂದ್ರವನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗುತ್ತದೆ.
ಆಕರ್ಷಕವಾಗಿ ಅಲಂಕರಿಸಿದ ಗೋವಿಂದ ನಾಯ್ಕ ದುಗಲಡ್ಕ ಇವರ ಮನೆಯ ಬಲಿಯೇಂದ್ರ ಪ್ರಥಮ ಬಹುಮಾನ ಪಡೆದುಕೊಂಡಿತು.
ಪುಷ್ಪಾವತಿ ಆಚಾರ್ಯ ಮತ್ತು ಮನೆಯವರ ಬಲಿಯೇಂದ್ರ ಎರಡನೇ ಬಹುಮಾನ ಮತ್ತು ಶಿವರಾಮ ನಾಯ್ಕ ನೆಲ್ಲಿಬಂಗಾರಡ್ಕ ಕೇರ್ಪಳ ಇವರ ಮನೆಯ ಬಲಿಯೇಂದ್ರ ತೃತೀಯ ಸ್ಥಾನ ಪಡೆದಿದೆ ಎಂದು ಮಿತ್ರ ಬಳಗದ ಪದಾಧಿಕಾರಿಗಳು ತಿಳಿಸಿದ್ದಾರೆ.
ಮಿತ್ರ ಬಳಗದ ವತಿಯಿಂದ ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಲಿಯೇಂದ್ರ ಅಲಂಕಾರ ಸ್ಪರ್ಧೆ, ಗೂಡು ದೀಪ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…
ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…
ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಅಪಾಯಕಾರಿ ಹೀಟ್ ಸ್ಟ್ರೆಸ್ ಹೆಚ್ಚುವ ಸಾಧ್ಯತೆ ಇದೆ ಎಂದು…