ಸುದ್ದಿಗಳು

ಮೀಸಲಾತಿ ಮುಕ್ತಿ ಅಭಿಯಾನ ಮುಂದುವರಿಕೆ: ಮೀಸಲಾತಿ ಮುಕ್ತಿ ಹೋರಾಟ ಸಮಿತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: 2020ರಲ್ಲಿ ಕೊನೆಗೊಳ್ಳಬೇಕಾದ ದೇಶದ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮೀಸಲಾತಿಯನ್ನು ಕೇಂದ್ರ ಸರ್ಕಾರ ಕ್ಯಾಬಿನೆಟ್‌ನಲ್ಲಿ ನಿರ್ಧರಿಸಿ 10 ವರ್ಷಗಳ ಕಾಲ ಅದೇ ರೀತಿಯಲ್ಲಿ ಮುಂದುವರಿಸುವ ನಿರ್ಧಾರ ಸರಿಯಲ್ಲ ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಮತ್ತು ಮೀಸಲಾತಿ ಮುಕ್ತಿ ಸಮಿತಿಯ ಸಂಚಾಲಕ ಪ್ರದೀಪ್‌ಕುಮಾರ್ ಕೆ.ಎಲ್ ಹೇಳಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಮೀಸಲಾತಿ ನೀಡುವುದಕ್ಕೆ ನಾವು ವಿರೋಧವಿಲ್ಲ. ಅದರೆ ಮೀಸಲಾತಿ ಕಾಲ ಕಾಲಕ್ಕೆ ಬದಲಾವಣೆಯಾಗಬೇಕು, ಎಲ್ಲಾ ಕ್ಷೇತ್ರದ ಜನರಿಗೂ ಮೀಸಲಾತಿಯ ಅವಕಾಶ ದೊರೆಯುವಂತಾಗಬೇಕು. ಒಂದೊಂದೇ ಕ್ಷೇತ್ರದಲ್ಲಿ 60-70 ವರ್ಷಗಳ ಕಾಲ ಮೀಸಲಾತಿ ನೀಡಿದರೆ ಉಳಿದ ಕ್ಷೇತ್ರದ ಜನರು ಅವಕಾಶದಿಂದ ವಂಚಿತರಾಗುತ್ತಾರೆ ಮತ್ತು ಮೀಸಲಾತಿ ನೀಡುವ ಉದ್ದೆಶ ಈಡೇರುವುದಿಲ್ಲ. ಮೀಸಲಾತಿ ಬದಲಿಸಲು ಅಥವಾ ಮುಂದುವರಿಸಲು ಅದಕ್ಕೆ ಪ್ರತ್ಯೇಕ ಸಮಿತಿ ರಚನೆ ಮಾಡಿ ಅವರು ನೀಡಿದ ತೀರ್ಮಾನದ ಆಧಾರದಲ್ಲಿ ಕ್ರಮ ಕೈಗೊಳ್ಳಬೇಕಿತ್ತು. ಈ ಹಿಂದೆ ಮೂರು ಬಾರಿ ನಿಯೋಜಿತ ಸಮಿತಿಯ ವರದಿಯ ಆಧಾರದಲ್ಲಿಯೇ ದೇಶದಲ್ಲಿ ಶೇ.20ರಷ್ಟು ಬದಲಾವಣೆಯನ್ನು ಮಾಡುತ್ತಿದ್ದರು. ಆದರೆ ಚುನಾವಣಾ ಸಮಿತಿಯ ತೀರ್ಮಾನದಂತೆ 2020ರಲ್ಲಿ ಕೊನೆಗೊಳ್ಳಬೇಕಾದ 20 ವರ್ಷದ ಮೀಸಲಾತಿಯ ಅವಧಿಯನ್ನು 10 ವರ್ಷಗಳ ಕಾಲ ಅದೇ ರೀತಿ ವಿಸ್ತರಿಸುವುದು ಎಂಬ ನಿರ್ಧಾರ ಸರಿಯಲ್ಲ ಎಂದರು.

2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸುಳ್ಯದಲ್ಲಿ ಮೀಸಲಾತಿ ಮುಕ್ತಿ ಅಭಿಯಾನವನ್ನು ಮಾಡಿ ಜನರಿಗೆ ಮಾಹಿತಿ ನೀಡುವ ಕಾರ್ಯವನ್ನು ಮೀಸಲಾತಿ ಮುಕ್ತಿ ಸಮಿತಿಯ ವತಿಯಿಂದ ನಡೆಸಲಾಗಿತ್ತು. ಮೀಸಲಾತಿ ಮುಕ್ತಿಗಾಗಿ ಅಭಿಯಾನ ಮತ್ತು ಕಾನೂನು ರೀತಿಯ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಶೋಕ್ ಎಡಮಲೆ, ಪ್ರವೀಣ್ ಮುಂಡೋಡಿ, ಚೆನ್ನಕೇಶವ ನಾಯಕ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

3 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

3 hours ago

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

9 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

9 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

16 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

16 hours ago