Advertisement
ಸುದ್ದಿಗಳು

ಮೀಸಲಾತಿ ಮುಕ್ತಿ ಅಭಿಯಾನ ಮುಂದುವರಿಕೆ: ಮೀಸಲಾತಿ ಮುಕ್ತಿ ಹೋರಾಟ ಸಮಿತಿ

Share

ಸುಳ್ಯ: 2020ರಲ್ಲಿ ಕೊನೆಗೊಳ್ಳಬೇಕಾದ ದೇಶದ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮೀಸಲಾತಿಯನ್ನು ಕೇಂದ್ರ ಸರ್ಕಾರ ಕ್ಯಾಬಿನೆಟ್‌ನಲ್ಲಿ ನಿರ್ಧರಿಸಿ 10 ವರ್ಷಗಳ ಕಾಲ ಅದೇ ರೀತಿಯಲ್ಲಿ ಮುಂದುವರಿಸುವ ನಿರ್ಧಾರ ಸರಿಯಲ್ಲ ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಮತ್ತು ಮೀಸಲಾತಿ ಮುಕ್ತಿ ಸಮಿತಿಯ ಸಂಚಾಲಕ ಪ್ರದೀಪ್‌ಕುಮಾರ್ ಕೆ.ಎಲ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಮೀಸಲಾತಿ ನೀಡುವುದಕ್ಕೆ ನಾವು ವಿರೋಧವಿಲ್ಲ. ಅದರೆ ಮೀಸಲಾತಿ ಕಾಲ ಕಾಲಕ್ಕೆ ಬದಲಾವಣೆಯಾಗಬೇಕು, ಎಲ್ಲಾ ಕ್ಷೇತ್ರದ ಜನರಿಗೂ ಮೀಸಲಾತಿಯ ಅವಕಾಶ ದೊರೆಯುವಂತಾಗಬೇಕು. ಒಂದೊಂದೇ ಕ್ಷೇತ್ರದಲ್ಲಿ 60-70 ವರ್ಷಗಳ ಕಾಲ ಮೀಸಲಾತಿ ನೀಡಿದರೆ ಉಳಿದ ಕ್ಷೇತ್ರದ ಜನರು ಅವಕಾಶದಿಂದ ವಂಚಿತರಾಗುತ್ತಾರೆ ಮತ್ತು ಮೀಸಲಾತಿ ನೀಡುವ ಉದ್ದೆಶ ಈಡೇರುವುದಿಲ್ಲ. ಮೀಸಲಾತಿ ಬದಲಿಸಲು ಅಥವಾ ಮುಂದುವರಿಸಲು ಅದಕ್ಕೆ ಪ್ರತ್ಯೇಕ ಸಮಿತಿ ರಚನೆ ಮಾಡಿ ಅವರು ನೀಡಿದ ತೀರ್ಮಾನದ ಆಧಾರದಲ್ಲಿ ಕ್ರಮ ಕೈಗೊಳ್ಳಬೇಕಿತ್ತು. ಈ ಹಿಂದೆ ಮೂರು ಬಾರಿ ನಿಯೋಜಿತ ಸಮಿತಿಯ ವರದಿಯ ಆಧಾರದಲ್ಲಿಯೇ ದೇಶದಲ್ಲಿ ಶೇ.20ರಷ್ಟು ಬದಲಾವಣೆಯನ್ನು ಮಾಡುತ್ತಿದ್ದರು. ಆದರೆ ಚುನಾವಣಾ ಸಮಿತಿಯ ತೀರ್ಮಾನದಂತೆ 2020ರಲ್ಲಿ ಕೊನೆಗೊಳ್ಳಬೇಕಾದ 20 ವರ್ಷದ ಮೀಸಲಾತಿಯ ಅವಧಿಯನ್ನು 10 ವರ್ಷಗಳ ಕಾಲ ಅದೇ ರೀತಿ ವಿಸ್ತರಿಸುವುದು ಎಂಬ ನಿರ್ಧಾರ ಸರಿಯಲ್ಲ ಎಂದರು.

2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸುಳ್ಯದಲ್ಲಿ ಮೀಸಲಾತಿ ಮುಕ್ತಿ ಅಭಿಯಾನವನ್ನು ಮಾಡಿ ಜನರಿಗೆ ಮಾಹಿತಿ ನೀಡುವ ಕಾರ್ಯವನ್ನು ಮೀಸಲಾತಿ ಮುಕ್ತಿ ಸಮಿತಿಯ ವತಿಯಿಂದ ನಡೆಸಲಾಗಿತ್ತು. ಮೀಸಲಾತಿ ಮುಕ್ತಿಗಾಗಿ ಅಭಿಯಾನ ಮತ್ತು ಕಾನೂನು ರೀತಿಯ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಶೋಕ್ ಎಡಮಲೆ, ಪ್ರವೀಣ್ ಮುಂಡೋಡಿ, ಚೆನ್ನಕೇಶವ ನಾಯಕ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

12 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

17 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

1 day ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago