Advertisement
ಸುದ್ದಿಗಳು

ಮೀಸಲಾತಿ ಮುಕ್ತಿ ಅಭಿಯಾನ ಮುಂದುವರಿಕೆ: ಮೀಸಲಾತಿ ಮುಕ್ತಿ ಹೋರಾಟ ಸಮಿತಿ

Share

ಸುಳ್ಯ: 2020ರಲ್ಲಿ ಕೊನೆಗೊಳ್ಳಬೇಕಾದ ದೇಶದ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮೀಸಲಾತಿಯನ್ನು ಕೇಂದ್ರ ಸರ್ಕಾರ ಕ್ಯಾಬಿನೆಟ್‌ನಲ್ಲಿ ನಿರ್ಧರಿಸಿ 10 ವರ್ಷಗಳ ಕಾಲ ಅದೇ ರೀತಿಯಲ್ಲಿ ಮುಂದುವರಿಸುವ ನಿರ್ಧಾರ ಸರಿಯಲ್ಲ ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಮತ್ತು ಮೀಸಲಾತಿ ಮುಕ್ತಿ ಸಮಿತಿಯ ಸಂಚಾಲಕ ಪ್ರದೀಪ್‌ಕುಮಾರ್ ಕೆ.ಎಲ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಮೀಸಲಾತಿ ನೀಡುವುದಕ್ಕೆ ನಾವು ವಿರೋಧವಿಲ್ಲ. ಅದರೆ ಮೀಸಲಾತಿ ಕಾಲ ಕಾಲಕ್ಕೆ ಬದಲಾವಣೆಯಾಗಬೇಕು, ಎಲ್ಲಾ ಕ್ಷೇತ್ರದ ಜನರಿಗೂ ಮೀಸಲಾತಿಯ ಅವಕಾಶ ದೊರೆಯುವಂತಾಗಬೇಕು. ಒಂದೊಂದೇ ಕ್ಷೇತ್ರದಲ್ಲಿ 60-70 ವರ್ಷಗಳ ಕಾಲ ಮೀಸಲಾತಿ ನೀಡಿದರೆ ಉಳಿದ ಕ್ಷೇತ್ರದ ಜನರು ಅವಕಾಶದಿಂದ ವಂಚಿತರಾಗುತ್ತಾರೆ ಮತ್ತು ಮೀಸಲಾತಿ ನೀಡುವ ಉದ್ದೆಶ ಈಡೇರುವುದಿಲ್ಲ. ಮೀಸಲಾತಿ ಬದಲಿಸಲು ಅಥವಾ ಮುಂದುವರಿಸಲು ಅದಕ್ಕೆ ಪ್ರತ್ಯೇಕ ಸಮಿತಿ ರಚನೆ ಮಾಡಿ ಅವರು ನೀಡಿದ ತೀರ್ಮಾನದ ಆಧಾರದಲ್ಲಿ ಕ್ರಮ ಕೈಗೊಳ್ಳಬೇಕಿತ್ತು. ಈ ಹಿಂದೆ ಮೂರು ಬಾರಿ ನಿಯೋಜಿತ ಸಮಿತಿಯ ವರದಿಯ ಆಧಾರದಲ್ಲಿಯೇ ದೇಶದಲ್ಲಿ ಶೇ.20ರಷ್ಟು ಬದಲಾವಣೆಯನ್ನು ಮಾಡುತ್ತಿದ್ದರು. ಆದರೆ ಚುನಾವಣಾ ಸಮಿತಿಯ ತೀರ್ಮಾನದಂತೆ 2020ರಲ್ಲಿ ಕೊನೆಗೊಳ್ಳಬೇಕಾದ 20 ವರ್ಷದ ಮೀಸಲಾತಿಯ ಅವಧಿಯನ್ನು 10 ವರ್ಷಗಳ ಕಾಲ ಅದೇ ರೀತಿ ವಿಸ್ತರಿಸುವುದು ಎಂಬ ನಿರ್ಧಾರ ಸರಿಯಲ್ಲ ಎಂದರು.

2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸುಳ್ಯದಲ್ಲಿ ಮೀಸಲಾತಿ ಮುಕ್ತಿ ಅಭಿಯಾನವನ್ನು ಮಾಡಿ ಜನರಿಗೆ ಮಾಹಿತಿ ನೀಡುವ ಕಾರ್ಯವನ್ನು ಮೀಸಲಾತಿ ಮುಕ್ತಿ ಸಮಿತಿಯ ವತಿಯಿಂದ ನಡೆಸಲಾಗಿತ್ತು. ಮೀಸಲಾತಿ ಮುಕ್ತಿಗಾಗಿ ಅಭಿಯಾನ ಮತ್ತು ಕಾನೂನು ರೀತಿಯ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಶೋಕ್ ಎಡಮಲೆ, ಪ್ರವೀಣ್ ಮುಂಡೋಡಿ, ಚೆನ್ನಕೇಶವ ನಾಯಕ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

7 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

7 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

15 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

24 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 days ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

2 days ago