Advertisement
ಕೃಷಿ

ಮುಂಗಾರಿನ ಸಿಂಚನಕ್ಕೆ “ಥಂಡರ್ ಲಿಲ್ಲಿ”

Share
ಪೆರ್ನಾಜೆ : ಮುಂಗಾರಿನ ಅಭಿಷೇಕಕ್ಕೆ ಮೆದುವಾಯಿತು ನೆಲವು ಧಗೆಯಾರಿದ ಹೃದಯದಲ್ಲಿ ಪುಟಿದೆದ್ದಿತು ಚೆಲುವು ಎಂದು ಕವಿಪುಂಗವರು ಹಾಡಿದ್ದೇನೊ ನಿಜ .
ಮೊದಲ ಮಳೆಯ ಹೂವಿದು ರಕ್ತ ಕೆಂಪು ಬಣ್ಣದ ಈ ಹೂವು ಬಲಿತಂತೆ ಗುಲಾಬಿ ಬಣ್ಣಕ್ಕೆ ತಿರುಗಿ ಅನಂತರ ಹಸಿರು ಬಣ್ಣಕ್ಕೆ ತಿರುಗುವ ಪ್ರಕ್ರಿಯೆ ನೋಡಲು ಆಹ್ಲಾದಕರ ಕೊನೆಗೆ ಅದರ ದಂಟಿನಂತೆಯೇ ಹೂಗಳು ಉದುರಿ ಹಸಿರಾಗಿ ಅದರಲ್ಲಿ ಹಳದಿ ಬಣ್ಣದ ಹಣ್ಣುಗಳಾಗುತ್ತವೆ.  ನೆಲದಡಿಯಲ್ಲಿ ಗೌಪ್ಯವಾಗಿ ಹುದುಗಿದ್ದ ಮಳೆ ಬಂದೊಡನೆ ಹೊರಬಂದು ನಗುವ ಈ ಹೂವಿನ ಸಸ್ಯಶಾಸ್ತ್ರ ಹೆಸರು ಹೆಕ್ಮಂಥಸ್ ಕೊಕ್ಸೀನಿಯಸ್  ಇದು ದಕ್ಷಿಣ ಆಫ್ರಿಕಾದಿಂದ ಬಂದ ಹೂವು.
ಈ ಅಪರೂಪದ ಹೂವಿಗೆ ಬ್ಲಡ್ ಲಿಲ್ಲಿ, ಗರುಡ ಲಿಲ್ಲಿ, ವಾಟರ್ ಲಿಲ್ಲಿ, ಸಿಡಿಲಮರಿ, ಥಂಡರ್ ಲಿಲ್ಲಿ, ತಿಂಗಳ ರಾಣಿ, ಮ್ಯಾಗ್ಮಿಲಿಯಾ, ಗದಾಪುಷ್ಪ ಎಂದು ಇದಕ್ಕೆ ಹಲವಾರು ನಾಮದೇಯಗಳು ಹೂಗಳಿಂದ ತುಂಬಿದ ಗೋಲಾಕಾರದ ಬೆಡಗಿ ಲಾವಣ್ಯವತಿಯಾಗಿ ರಸಿಕರ ಕಣ್ಮನಗಳಿಗೆ ಹರ್ಷೋಲ್ಲಾಸ ತುಂಬುತ್ತದೆ.
ವರ್ಷದಲ್ಲಿ ಒಮ್ಮೆ ಮಾತ್ರ ಅರಳುವ ಅಪರೂಪದ ಅತಿಥಿ ಸೌಂದರ್ಯ ಕಂಡರೆ ಅಸ್ತಿತ್ವ ಸಾರ್ಥಕವೆನಿಸುತ್ತದೆ ಇದು ಒಂದು ಸಂಯುಕ್ತ ಹೂವು ಪ್ರತಿ ಹೂವಿನಲ್ಲಿ ಸೂಜಿಯಾಕಾರದ ಏಳು ದಳಗಳಿರುತ್ತವೆ ಅದರ ತಳಭಾಗದಲ್ಲಿ ಆರು ತೆಳ್ಳಗಿನ ದಳಗಳಂತೆ ಇರುವ ಪುಷ್ಪಪಾತ್ರೆ ಇರುತ್ತದೆ ಈ ರೀತಿಯ ಹೂವುಗಳು ಒಂದೇ ಮುಷ್ಟಿಯಲ್ಲಿ ಅದುಮಿ ಹಿಡಿದಂತೆ ಗೋಲಾಕಾರವಾಗಿ ಇರುತ್ತವೆ ಮೊದಲ ಮಳೆಗೆ ಬಟ್ಟಬಯಲಲ್ಲಿ  ಭೂಮಿಯನ್ನು ಸೀಳಿ ಬಂದಂತೆ ಬಾಣದಂತಿರುವ ಮೊಗ್ಗು ಹೊರಚಿಮ್ಮಿ  ನಿಧಾನವಾಗಿ ಹೂವು ಅರಳುತ್ತದೆ ತದನಂತರ ಹೂವು ಬಾಡಿ ದಪ್ಪ ಎಲೆಯ ಹಸಿರು ಬಣ್ಣದಾಗಿದ್ದು ಬೇಸಿಗೆ ಕಾಲದಲ್ಲಿ ಹಳದಿ ಬಣ್ಣಕ್ಕೆ ತಿರುಗಿ ಗಿಡ ನಶಿಸುತ್ತದೆ (ಸಾಯುತ್ತದೆ) ನೆಲದಾಳದಲ್ಲಿ ಗಡ್ಡೆ ಇದ್ದು ಬಿಳಿ ಈರುಳ್ಳಿಯಂತೆ ಅಡಗಿರುತ್ತದೆ ವರ್ಷಗಳು ಕಳೆದಂತೆ ಗಡ್ಡೆಗಳ ಗಾತ್ರ ದೊಡ್ಡದಾಗುತ್ತದೆ. ಅಂತಹ ಗಿಡದ ಹೂವು ದೊಡ್ಡದಾಗಿರುತ್ತವೆ ಗಡ್ಡೆಯ ಸುತ್ತಲೂ ಮರಿ ಗಡ್ಡೆಗಳು ಗಡ್ಡೆಗಳಾಗುತ್ತದೆ.
ಗೊಂಚಲು ಗೊಂಚಲು ಹೂವುಗಳು ಅರಳಿ ನಿಂತಾಗ ಗಂಧರ್ವಲೋಕದ ಅಪ್ಸರೆಯನ್ನು ಕಂಡಂತಾಗುತ್ತದೆ ಇಂತಹ ಹೂವಿನ ಗಡ್ಡೆಗಳಿಗೆ ಬೇಸಿಗೆಯಲ್ಲಿ ನೀರಿನ ಅಗತ್ಯವೇ ಇರುವುದಿಲ್ಲ ದೇವರ ಆರಾಧನೆಗೂ ಬಳಸುವ ಹೆಣ್ಣಿನ ಮುಡಿಯನ್ನು ಅಲಂಕರಿಸುವ ಈ ಹೂವುಗಳಿಗೆ ಬೇಡಿಕೆ ಇಲ್ಲದ ದಿನವಿಲ್ಲ ಅಲಂಕಾರಿಕವಾಗಿಯೂ ಈ ಹೂಗಳನ್ನು ಬಳಸುತ್ತಾರೆ ಅನೇಕ ದಿನಗಳವರೆಗೆ ಬಾಡದಂತೆ ಆಗತಾನೆ ಗಿಡದಿಂದ ಕಿತ್ತಂತೆ ಕೆಲದಿನಗಳ ಕಾಲ ಇದನ್ನು ಕಾಯ್ದಿಡಲು ಸಾಧ್ಯ ಈಗೀಗ ಈ ಹೂವಿನ ಗಿಡಗಳು ಕಣ್ಮರೆಯಾಗುತ್ತಿವೆ ಬರಹಗಾರ ಕುಮಾರ್ ಪೆರ್ನಾಜೆ ಅವರ ಮನೆಯ ಸುತ್ತಲೂ ಅರಳಿ ನಗುವ ವಿಶಿಷ್ಟ ಹೂವನ್ನು ಹೆಚ್ಚಾಗಿ ಬೆಳೆಸಿ ರಕ್ಷಿಸುವತ್ತ ಗಮನ ಕೊಡಬೇಕಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

2 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

9 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

10 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

17 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

18 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago