Advertisement
ಕೃಷಿ

ಮುಂಗಾರಿನ ಸಿಂಚನಕ್ಕೆ “ಥಂಡರ್ ಲಿಲ್ಲಿ”

Share
ಪೆರ್ನಾಜೆ : ಮುಂಗಾರಿನ ಅಭಿಷೇಕಕ್ಕೆ ಮೆದುವಾಯಿತು ನೆಲವು ಧಗೆಯಾರಿದ ಹೃದಯದಲ್ಲಿ ಪುಟಿದೆದ್ದಿತು ಚೆಲುವು ಎಂದು ಕವಿಪುಂಗವರು ಹಾಡಿದ್ದೇನೊ ನಿಜ .
ಮೊದಲ ಮಳೆಯ ಹೂವಿದು ರಕ್ತ ಕೆಂಪು ಬಣ್ಣದ ಈ ಹೂವು ಬಲಿತಂತೆ ಗುಲಾಬಿ ಬಣ್ಣಕ್ಕೆ ತಿರುಗಿ ಅನಂತರ ಹಸಿರು ಬಣ್ಣಕ್ಕೆ ತಿರುಗುವ ಪ್ರಕ್ರಿಯೆ ನೋಡಲು ಆಹ್ಲಾದಕರ ಕೊನೆಗೆ ಅದರ ದಂಟಿನಂತೆಯೇ ಹೂಗಳು ಉದುರಿ ಹಸಿರಾಗಿ ಅದರಲ್ಲಿ ಹಳದಿ ಬಣ್ಣದ ಹಣ್ಣುಗಳಾಗುತ್ತವೆ.  ನೆಲದಡಿಯಲ್ಲಿ ಗೌಪ್ಯವಾಗಿ ಹುದುಗಿದ್ದ ಮಳೆ ಬಂದೊಡನೆ ಹೊರಬಂದು ನಗುವ ಈ ಹೂವಿನ ಸಸ್ಯಶಾಸ್ತ್ರ ಹೆಸರು ಹೆಕ್ಮಂಥಸ್ ಕೊಕ್ಸೀನಿಯಸ್  ಇದು ದಕ್ಷಿಣ ಆಫ್ರಿಕಾದಿಂದ ಬಂದ ಹೂವು.
ಈ ಅಪರೂಪದ ಹೂವಿಗೆ ಬ್ಲಡ್ ಲಿಲ್ಲಿ, ಗರುಡ ಲಿಲ್ಲಿ, ವಾಟರ್ ಲಿಲ್ಲಿ, ಸಿಡಿಲಮರಿ, ಥಂಡರ್ ಲಿಲ್ಲಿ, ತಿಂಗಳ ರಾಣಿ, ಮ್ಯಾಗ್ಮಿಲಿಯಾ, ಗದಾಪುಷ್ಪ ಎಂದು ಇದಕ್ಕೆ ಹಲವಾರು ನಾಮದೇಯಗಳು ಹೂಗಳಿಂದ ತುಂಬಿದ ಗೋಲಾಕಾರದ ಬೆಡಗಿ ಲಾವಣ್ಯವತಿಯಾಗಿ ರಸಿಕರ ಕಣ್ಮನಗಳಿಗೆ ಹರ್ಷೋಲ್ಲಾಸ ತುಂಬುತ್ತದೆ.
ವರ್ಷದಲ್ಲಿ ಒಮ್ಮೆ ಮಾತ್ರ ಅರಳುವ ಅಪರೂಪದ ಅತಿಥಿ ಸೌಂದರ್ಯ ಕಂಡರೆ ಅಸ್ತಿತ್ವ ಸಾರ್ಥಕವೆನಿಸುತ್ತದೆ ಇದು ಒಂದು ಸಂಯುಕ್ತ ಹೂವು ಪ್ರತಿ ಹೂವಿನಲ್ಲಿ ಸೂಜಿಯಾಕಾರದ ಏಳು ದಳಗಳಿರುತ್ತವೆ ಅದರ ತಳಭಾಗದಲ್ಲಿ ಆರು ತೆಳ್ಳಗಿನ ದಳಗಳಂತೆ ಇರುವ ಪುಷ್ಪಪಾತ್ರೆ ಇರುತ್ತದೆ ಈ ರೀತಿಯ ಹೂವುಗಳು ಒಂದೇ ಮುಷ್ಟಿಯಲ್ಲಿ ಅದುಮಿ ಹಿಡಿದಂತೆ ಗೋಲಾಕಾರವಾಗಿ ಇರುತ್ತವೆ ಮೊದಲ ಮಳೆಗೆ ಬಟ್ಟಬಯಲಲ್ಲಿ  ಭೂಮಿಯನ್ನು ಸೀಳಿ ಬಂದಂತೆ ಬಾಣದಂತಿರುವ ಮೊಗ್ಗು ಹೊರಚಿಮ್ಮಿ  ನಿಧಾನವಾಗಿ ಹೂವು ಅರಳುತ್ತದೆ ತದನಂತರ ಹೂವು ಬಾಡಿ ದಪ್ಪ ಎಲೆಯ ಹಸಿರು ಬಣ್ಣದಾಗಿದ್ದು ಬೇಸಿಗೆ ಕಾಲದಲ್ಲಿ ಹಳದಿ ಬಣ್ಣಕ್ಕೆ ತಿರುಗಿ ಗಿಡ ನಶಿಸುತ್ತದೆ (ಸಾಯುತ್ತದೆ) ನೆಲದಾಳದಲ್ಲಿ ಗಡ್ಡೆ ಇದ್ದು ಬಿಳಿ ಈರುಳ್ಳಿಯಂತೆ ಅಡಗಿರುತ್ತದೆ ವರ್ಷಗಳು ಕಳೆದಂತೆ ಗಡ್ಡೆಗಳ ಗಾತ್ರ ದೊಡ್ಡದಾಗುತ್ತದೆ. ಅಂತಹ ಗಿಡದ ಹೂವು ದೊಡ್ಡದಾಗಿರುತ್ತವೆ ಗಡ್ಡೆಯ ಸುತ್ತಲೂ ಮರಿ ಗಡ್ಡೆಗಳು ಗಡ್ಡೆಗಳಾಗುತ್ತದೆ.
ಗೊಂಚಲು ಗೊಂಚಲು ಹೂವುಗಳು ಅರಳಿ ನಿಂತಾಗ ಗಂಧರ್ವಲೋಕದ ಅಪ್ಸರೆಯನ್ನು ಕಂಡಂತಾಗುತ್ತದೆ ಇಂತಹ ಹೂವಿನ ಗಡ್ಡೆಗಳಿಗೆ ಬೇಸಿಗೆಯಲ್ಲಿ ನೀರಿನ ಅಗತ್ಯವೇ ಇರುವುದಿಲ್ಲ ದೇವರ ಆರಾಧನೆಗೂ ಬಳಸುವ ಹೆಣ್ಣಿನ ಮುಡಿಯನ್ನು ಅಲಂಕರಿಸುವ ಈ ಹೂವುಗಳಿಗೆ ಬೇಡಿಕೆ ಇಲ್ಲದ ದಿನವಿಲ್ಲ ಅಲಂಕಾರಿಕವಾಗಿಯೂ ಈ ಹೂಗಳನ್ನು ಬಳಸುತ್ತಾರೆ ಅನೇಕ ದಿನಗಳವರೆಗೆ ಬಾಡದಂತೆ ಆಗತಾನೆ ಗಿಡದಿಂದ ಕಿತ್ತಂತೆ ಕೆಲದಿನಗಳ ಕಾಲ ಇದನ್ನು ಕಾಯ್ದಿಡಲು ಸಾಧ್ಯ ಈಗೀಗ ಈ ಹೂವಿನ ಗಿಡಗಳು ಕಣ್ಮರೆಯಾಗುತ್ತಿವೆ ಬರಹಗಾರ ಕುಮಾರ್ ಪೆರ್ನಾಜೆ ಅವರ ಮನೆಯ ಸುತ್ತಲೂ ಅರಳಿ ನಗುವ ವಿಶಿಷ್ಟ ಹೂವನ್ನು ಹೆಚ್ಚಾಗಿ ಬೆಳೆಸಿ ರಕ್ಷಿಸುವತ್ತ ಗಮನ ಕೊಡಬೇಕಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago