ಕೃಷಿ

“ಮುಂಗಾರು ಮಳೆ” ಇನ್ನೂ 2 ದಿನ ವಿಳಂಬ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ನೈರುತ್ಯ ಮುಂಗಾರು ಶ್ರೀಲಂಕಾ ತಲಪಿದ ಬಳಿಕ ಇದೀಗ ಮತ್ತೆ ವಿಳಂಬವಾಗಿದೆ. ಮಧ್ಯ ಶ್ರೀಲಂಕಾ ತಲಪಿದ ನೈರುತ್ಯ ಮುಂಗಾರು ಇದೀಗ ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ವಿಳಂಬವಾಗುತ್ತಿದೆ. ಈಗಿನ ಪ್ರಕಾರ 2 ದಿನ ವಿಳಂಬವಾಗುವ ಸಾಧ್ಯತೆ ಇದೆ. ನಿರೀಕ್ಷೆ ಪ್ರಕಾರ ಜೂ.6 ರಂದು ಕೇರಳ ಪ್ರವೇಶವಾಗಬೇಕಿದ್ದ ಮುಂಗಾರು ಇದೀಗ ವಿಳಂಬವಾಗಿದೆ. ಹವಾಮಾನ ಇಲಾಖೆ  ಪ್ರಕಾರ ಕೇರಳಕ್ಕೆ ಜೂನ್ 8 ರ ಸುಮಾರಿಗೆ ತಲುಪಬಹುದಾದ ಮುನ್ಸೂಚನೆ ನೀಡಿದೆ.

Advertisement
Advertisement

ನಿರೀಕ್ಷೆ ಪ್ರಕಾರ ಜೂ.6 ರಂದು  ನೈರುತ್ಯ ಮುಂಗಾರು ಕೇರಳ ಪ್ರವೇಶ ಮಾಡಬೇಕಾಗಿತ್ತು. 3 ದಿನಗಳ ಹಿಂದೆಯೇ ನಿರೀಕ್ಷೆ ಪ್ರಕಾರ ಶ್ರೀಲಂಕಾ ಪ್ರವೇಶ ಮಾಡಿತ್ತು. ಆದರೆ ಅರಬೀ ಸಮುದ್ರದಲ್ಲಿ  ಉಂಟಾದ ವಾಯುಭಾರ ಕುಸಿತ ಮುಂಗಾರು ಮೇಲೆ ಪರಿಣಾಮ ಬೀರಿದೆ. ಸಾಮಾನ್ಯವಾಗಿ ಶ್ರೀಲಂಕಾದಿಂದ 2 ದಿನಗಳಲ್ಲಿ  ಕೇರಳಕ್ಕೆ ಮುಂಗಾರು ಪ್ರವೇಶ ಮಾಡುತ್ತದೆ. ಆದರೆ ಇದೀಗ ಮತ್ತೆ ವಿಳಂಬವಾಗಿದೆ.  ಲಕ್ಷದ್ವೀಪದಲ್ಲಿ  ಸುಳಿಗಳು ಇರುವುದರಿಂದ ಮುಂಗಾರು ಮಾರುತವನ್ನು  ದುರ್ಬಲಗೊಳಿಸಿದೆ ಎಂದು ಹವಾಮಾನ ವಿಶ್ಲೇಷಣೆ ತಿಳಿಸಿದೆ. ಈ ಎಲ್ಲಾ ಕಾರಣದಿಂದ ಜೂ.8 ಸುಮಾರಿಗೆ ಕೇರಳಕ್ಕೆ ಪ್ರವೇಶವಾಗಿ ನಂತರ 2-3  ದಿನಗಳಲ್ಲಿ  ಕರಾವಳಿ ಮೂಲಕ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ.

ಪ್ರತೀ ವರ್ಷ ಜೂ.5 ರ ಹೊತ್ತಿಗೆ ಮುಂಗಾರು ಮಾರುತ ಕೇರಳ ಪ್ರವೇಶವಾಗುತ್ತಿತ್ತು. ಅಪರೂಪ ಎಂಬಂತೆ ಈ ಬಾರಿ ವಿಳಂಬವಾಗಿದೆ. 1972 ರ ನಂತರ ಇದೇ ಮೊದಲ ಬಾರಿಗೆ ಇಷ್ಟೊಂದು ವಿಳಂಬವಾಗಿದೆ. 1972 ರಲ್ಲಿ  ಜೂ.18 ಕ್ಕೆ ಮುಂಗಾರು ಕೇರಳವನ್ನು  ಪ್ರವೇಶ ಮಾಡಿತ್ತು. ಅದಕ್ಕೂ ಮೊದಲು 1918 ಹಾಗೂ 1955 ರಲ್ಲಿ  ಜೂ.11 ರಂದು ಮುಂಗಾರು ಪ್ರವೇಶವಾಗಿತ್ತು. ಉಳಿದೆಲ್ಲಾ ವರ್ಷ ಸಾಮಾನ್ಯವಾಗಿ ಜೂ.5 ರೊಳಗಾಗಿ ಮುಂಗಾರು ಮಾರುತ ಕೇರಳ ಪ್ರವೇಶ ಮಾಡುತ್ತಿತ್ತು.

ಈ ನಡುವೆ ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ರಾಜ್ಯದ ಕೆಲವು ಕಡೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಅದರ ಬೆನ್ನಿಗೇ ನೈರುತ್ಯ ಮುಂಗಾರು ಪ್ರವೇಶವಾದರೆ ರಾಜ್ಯದಲ್ಲಿ ಮಳೆಗಾಲ ಆರಂಭ.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

7 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

16 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

17 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

18 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

22 hours ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

22 hours ago