Advertisement
ಕೃಷಿ

“ಮುಂಗಾರು ಮಳೆ” ಇನ್ನೂ 2 ದಿನ ವಿಳಂಬ

Share

ಸುಳ್ಯ: ನೈರುತ್ಯ ಮುಂಗಾರು ಶ್ರೀಲಂಕಾ ತಲಪಿದ ಬಳಿಕ ಇದೀಗ ಮತ್ತೆ ವಿಳಂಬವಾಗಿದೆ. ಮಧ್ಯ ಶ್ರೀಲಂಕಾ ತಲಪಿದ ನೈರುತ್ಯ ಮುಂಗಾರು ಇದೀಗ ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ವಿಳಂಬವಾಗುತ್ತಿದೆ. ಈಗಿನ ಪ್ರಕಾರ 2 ದಿನ ವಿಳಂಬವಾಗುವ ಸಾಧ್ಯತೆ ಇದೆ. ನಿರೀಕ್ಷೆ ಪ್ರಕಾರ ಜೂ.6 ರಂದು ಕೇರಳ ಪ್ರವೇಶವಾಗಬೇಕಿದ್ದ ಮುಂಗಾರು ಇದೀಗ ವಿಳಂಬವಾಗಿದೆ. ಹವಾಮಾನ ಇಲಾಖೆ  ಪ್ರಕಾರ ಕೇರಳಕ್ಕೆ ಜೂನ್ 8 ರ ಸುಮಾರಿಗೆ ತಲುಪಬಹುದಾದ ಮುನ್ಸೂಚನೆ ನೀಡಿದೆ.

ನಿರೀಕ್ಷೆ ಪ್ರಕಾರ ಜೂ.6 ರಂದು  ನೈರುತ್ಯ ಮುಂಗಾರು ಕೇರಳ ಪ್ರವೇಶ ಮಾಡಬೇಕಾಗಿತ್ತು. 3 ದಿನಗಳ ಹಿಂದೆಯೇ ನಿರೀಕ್ಷೆ ಪ್ರಕಾರ ಶ್ರೀಲಂಕಾ ಪ್ರವೇಶ ಮಾಡಿತ್ತು. ಆದರೆ ಅರಬೀ ಸಮುದ್ರದಲ್ಲಿ  ಉಂಟಾದ ವಾಯುಭಾರ ಕುಸಿತ ಮುಂಗಾರು ಮೇಲೆ ಪರಿಣಾಮ ಬೀರಿದೆ. ಸಾಮಾನ್ಯವಾಗಿ ಶ್ರೀಲಂಕಾದಿಂದ 2 ದಿನಗಳಲ್ಲಿ  ಕೇರಳಕ್ಕೆ ಮುಂಗಾರು ಪ್ರವೇಶ ಮಾಡುತ್ತದೆ. ಆದರೆ ಇದೀಗ ಮತ್ತೆ ವಿಳಂಬವಾಗಿದೆ.  ಲಕ್ಷದ್ವೀಪದಲ್ಲಿ  ಸುಳಿಗಳು ಇರುವುದರಿಂದ ಮುಂಗಾರು ಮಾರುತವನ್ನು  ದುರ್ಬಲಗೊಳಿಸಿದೆ ಎಂದು ಹವಾಮಾನ ವಿಶ್ಲೇಷಣೆ ತಿಳಿಸಿದೆ. ಈ ಎಲ್ಲಾ ಕಾರಣದಿಂದ ಜೂ.8 ಸುಮಾರಿಗೆ ಕೇರಳಕ್ಕೆ ಪ್ರವೇಶವಾಗಿ ನಂತರ 2-3  ದಿನಗಳಲ್ಲಿ  ಕರಾವಳಿ ಮೂಲಕ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ.

ಪ್ರತೀ ವರ್ಷ ಜೂ.5 ರ ಹೊತ್ತಿಗೆ ಮುಂಗಾರು ಮಾರುತ ಕೇರಳ ಪ್ರವೇಶವಾಗುತ್ತಿತ್ತು. ಅಪರೂಪ ಎಂಬಂತೆ ಈ ಬಾರಿ ವಿಳಂಬವಾಗಿದೆ. 1972 ರ ನಂತರ ಇದೇ ಮೊದಲ ಬಾರಿಗೆ ಇಷ್ಟೊಂದು ವಿಳಂಬವಾಗಿದೆ. 1972 ರಲ್ಲಿ  ಜೂ.18 ಕ್ಕೆ ಮುಂಗಾರು ಕೇರಳವನ್ನು  ಪ್ರವೇಶ ಮಾಡಿತ್ತು. ಅದಕ್ಕೂ ಮೊದಲು 1918 ಹಾಗೂ 1955 ರಲ್ಲಿ  ಜೂ.11 ರಂದು ಮುಂಗಾರು ಪ್ರವೇಶವಾಗಿತ್ತು. ಉಳಿದೆಲ್ಲಾ ವರ್ಷ ಸಾಮಾನ್ಯವಾಗಿ ಜೂ.5 ರೊಳಗಾಗಿ ಮುಂಗಾರು ಮಾರುತ ಕೇರಳ ಪ್ರವೇಶ ಮಾಡುತ್ತಿತ್ತು.

ಈ ನಡುವೆ ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ರಾಜ್ಯದ ಕೆಲವು ಕಡೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಅದರ ಬೆನ್ನಿಗೇ ನೈರುತ್ಯ ಮುಂಗಾರು ಪ್ರವೇಶವಾದರೆ ರಾಜ್ಯದಲ್ಲಿ ಮಳೆಗಾಲ ಆರಂಭ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 hour ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

2 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago