Advertisement
ಕೃಷಿ

“ಮುಂಗಾರು ಮಳೆ” ಇನ್ನೂ 2 ದಿನ ವಿಳಂಬ

Share

ಸುಳ್ಯ: ನೈರುತ್ಯ ಮುಂಗಾರು ಶ್ರೀಲಂಕಾ ತಲಪಿದ ಬಳಿಕ ಇದೀಗ ಮತ್ತೆ ವಿಳಂಬವಾಗಿದೆ. ಮಧ್ಯ ಶ್ರೀಲಂಕಾ ತಲಪಿದ ನೈರುತ್ಯ ಮುಂಗಾರು ಇದೀಗ ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ವಿಳಂಬವಾಗುತ್ತಿದೆ. ಈಗಿನ ಪ್ರಕಾರ 2 ದಿನ ವಿಳಂಬವಾಗುವ ಸಾಧ್ಯತೆ ಇದೆ. ನಿರೀಕ್ಷೆ ಪ್ರಕಾರ ಜೂ.6 ರಂದು ಕೇರಳ ಪ್ರವೇಶವಾಗಬೇಕಿದ್ದ ಮುಂಗಾರು ಇದೀಗ ವಿಳಂಬವಾಗಿದೆ. ಹವಾಮಾನ ಇಲಾಖೆ  ಪ್ರಕಾರ ಕೇರಳಕ್ಕೆ ಜೂನ್ 8 ರ ಸುಮಾರಿಗೆ ತಲುಪಬಹುದಾದ ಮುನ್ಸೂಚನೆ ನೀಡಿದೆ.

ನಿರೀಕ್ಷೆ ಪ್ರಕಾರ ಜೂ.6 ರಂದು  ನೈರುತ್ಯ ಮುಂಗಾರು ಕೇರಳ ಪ್ರವೇಶ ಮಾಡಬೇಕಾಗಿತ್ತು. 3 ದಿನಗಳ ಹಿಂದೆಯೇ ನಿರೀಕ್ಷೆ ಪ್ರಕಾರ ಶ್ರೀಲಂಕಾ ಪ್ರವೇಶ ಮಾಡಿತ್ತು. ಆದರೆ ಅರಬೀ ಸಮುದ್ರದಲ್ಲಿ  ಉಂಟಾದ ವಾಯುಭಾರ ಕುಸಿತ ಮುಂಗಾರು ಮೇಲೆ ಪರಿಣಾಮ ಬೀರಿದೆ. ಸಾಮಾನ್ಯವಾಗಿ ಶ್ರೀಲಂಕಾದಿಂದ 2 ದಿನಗಳಲ್ಲಿ  ಕೇರಳಕ್ಕೆ ಮುಂಗಾರು ಪ್ರವೇಶ ಮಾಡುತ್ತದೆ. ಆದರೆ ಇದೀಗ ಮತ್ತೆ ವಿಳಂಬವಾಗಿದೆ.  ಲಕ್ಷದ್ವೀಪದಲ್ಲಿ  ಸುಳಿಗಳು ಇರುವುದರಿಂದ ಮುಂಗಾರು ಮಾರುತವನ್ನು  ದುರ್ಬಲಗೊಳಿಸಿದೆ ಎಂದು ಹವಾಮಾನ ವಿಶ್ಲೇಷಣೆ ತಿಳಿಸಿದೆ. ಈ ಎಲ್ಲಾ ಕಾರಣದಿಂದ ಜೂ.8 ಸುಮಾರಿಗೆ ಕೇರಳಕ್ಕೆ ಪ್ರವೇಶವಾಗಿ ನಂತರ 2-3  ದಿನಗಳಲ್ಲಿ  ಕರಾವಳಿ ಮೂಲಕ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ.

ಪ್ರತೀ ವರ್ಷ ಜೂ.5 ರ ಹೊತ್ತಿಗೆ ಮುಂಗಾರು ಮಾರುತ ಕೇರಳ ಪ್ರವೇಶವಾಗುತ್ತಿತ್ತು. ಅಪರೂಪ ಎಂಬಂತೆ ಈ ಬಾರಿ ವಿಳಂಬವಾಗಿದೆ. 1972 ರ ನಂತರ ಇದೇ ಮೊದಲ ಬಾರಿಗೆ ಇಷ್ಟೊಂದು ವಿಳಂಬವಾಗಿದೆ. 1972 ರಲ್ಲಿ  ಜೂ.18 ಕ್ಕೆ ಮುಂಗಾರು ಕೇರಳವನ್ನು  ಪ್ರವೇಶ ಮಾಡಿತ್ತು. ಅದಕ್ಕೂ ಮೊದಲು 1918 ಹಾಗೂ 1955 ರಲ್ಲಿ  ಜೂ.11 ರಂದು ಮುಂಗಾರು ಪ್ರವೇಶವಾಗಿತ್ತು. ಉಳಿದೆಲ್ಲಾ ವರ್ಷ ಸಾಮಾನ್ಯವಾಗಿ ಜೂ.5 ರೊಳಗಾಗಿ ಮುಂಗಾರು ಮಾರುತ ಕೇರಳ ಪ್ರವೇಶ ಮಾಡುತ್ತಿತ್ತು.

ಈ ನಡುವೆ ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ರಾಜ್ಯದ ಕೆಲವು ಕಡೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಅದರ ಬೆನ್ನಿಗೇ ನೈರುತ್ಯ ಮುಂಗಾರು ಪ್ರವೇಶವಾದರೆ ರಾಜ್ಯದಲ್ಲಿ ಮಳೆಗಾಲ ಆರಂಭ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

7 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago