ಮಂಗಳೂರು: ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈಗ ಎಲ್ಲರೂ ಬಿ ಎಲರ್ಟ್ ಇರಬೇಕಾಗಿದೆ. ಏಕೆಂದರೆ ನೇತ್ರಾವತಿ, ಕುಮಾರಧಾರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಜಿಲ್ಲಾಡಳಿತ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಮಳೆಯ ಕಾರಣದಿಂದ ಸಮುದ್ರ ಅಲೆಗಳು 3.2 ರಿಂದ 3.9 ಮೀಟರ್ ಎತ್ತರದಲ್ಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ನೇತ್ರಾವತಿ, ಕುಮಾರಧಾರ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ. 13 ಜನರ ಎನ್ ಡಿ ಆರ್ ಎಫ್ ತಂಡವು ಸುಬ್ರಹ್ಮಣ್ಯ, ಮಂಗಳೂರಿನಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇದೆ.
ಜಿಲ್ಲೆಯಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು
ಮಂಗಳೂರಿನಲ್ಲಿ 12, ಬಂಟ್ವಾಳ 2, ಬೆಳ್ತಂಗಡಿ 7, ಪುತ್ತೂರು ,ಮೂಡುಬಿದಿರೆ,ಕಡಬದಲ್ಲಿ ತಲಾ ಒಂದು, ಸುಳ್ಯ ತಾಲೂಕಿನಲ್ಲಿ 2 ಕಡೆ ಕೇಂದ್ರ ತೆರೆಯಲಾಾಗಿದೆ.
ಯಾವುದೇ ತುರ್ತು ಸಹಾಯಕ್ಕೆ ಸಾರ್ವಜನಿಕರು ಇಲಾಖೆಗಳನ್ನು ಸಂಪರ್ಕಿಲು ಕೋರಲಾಗಿದೆ.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…