ಮಂಗಳೂರು: ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈಗ ಎಲ್ಲರೂ ಬಿ ಎಲರ್ಟ್ ಇರಬೇಕಾಗಿದೆ. ಏಕೆಂದರೆ ನೇತ್ರಾವತಿ, ಕುಮಾರಧಾರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಜಿಲ್ಲಾಡಳಿತ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಮಳೆಯ ಕಾರಣದಿಂದ ಸಮುದ್ರ ಅಲೆಗಳು 3.2 ರಿಂದ 3.9 ಮೀಟರ್ ಎತ್ತರದಲ್ಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ನೇತ್ರಾವತಿ, ಕುಮಾರಧಾರ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ. 13 ಜನರ ಎನ್ ಡಿ ಆರ್ ಎಫ್ ತಂಡವು ಸುಬ್ರಹ್ಮಣ್ಯ, ಮಂಗಳೂರಿನಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇದೆ.
ಜಿಲ್ಲೆಯಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು
ಮಂಗಳೂರಿನಲ್ಲಿ 12, ಬಂಟ್ವಾಳ 2, ಬೆಳ್ತಂಗಡಿ 7, ಪುತ್ತೂರು ,ಮೂಡುಬಿದಿರೆ,ಕಡಬದಲ್ಲಿ ತಲಾ ಒಂದು, ಸುಳ್ಯ ತಾಲೂಕಿನಲ್ಲಿ 2 ಕಡೆ ಕೇಂದ್ರ ತೆರೆಯಲಾಾಗಿದೆ.
ಯಾವುದೇ ತುರ್ತು ಸಹಾಯಕ್ಕೆ ಸಾರ್ವಜನಿಕರು ಇಲಾಖೆಗಳನ್ನು ಸಂಪರ್ಕಿಲು ಕೋರಲಾಗಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…