ಮಂಗಳೂರು: ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈಗ ಎಲ್ಲರೂ ಬಿ ಎಲರ್ಟ್ ಇರಬೇಕಾಗಿದೆ. ಏಕೆಂದರೆ ನೇತ್ರಾವತಿ, ಕುಮಾರಧಾರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಜಿಲ್ಲಾಡಳಿತ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಮಳೆಯ ಕಾರಣದಿಂದ ಸಮುದ್ರ ಅಲೆಗಳು 3.2 ರಿಂದ 3.9 ಮೀಟರ್ ಎತ್ತರದಲ್ಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ನೇತ್ರಾವತಿ, ಕುಮಾರಧಾರ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ. 13 ಜನರ ಎನ್ ಡಿ ಆರ್ ಎಫ್ ತಂಡವು ಸುಬ್ರಹ್ಮಣ್ಯ, ಮಂಗಳೂರಿನಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇದೆ.
ಜಿಲ್ಲೆಯಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು
ಮಂಗಳೂರಿನಲ್ಲಿ 12, ಬಂಟ್ವಾಳ 2, ಬೆಳ್ತಂಗಡಿ 7, ಪುತ್ತೂರು ,ಮೂಡುಬಿದಿರೆ,ಕಡಬದಲ್ಲಿ ತಲಾ ಒಂದು, ಸುಳ್ಯ ತಾಲೂಕಿನಲ್ಲಿ 2 ಕಡೆ ಕೇಂದ್ರ ತೆರೆಯಲಾಾಗಿದೆ.
ಯಾವುದೇ ತುರ್ತು ಸಹಾಯಕ್ಕೆ ಸಾರ್ವಜನಿಕರು ಇಲಾಖೆಗಳನ್ನು ಸಂಪರ್ಕಿಲು ಕೋರಲಾಗಿದೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…