Advertisement
ಸುದ್ದಿಗಳು

ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಶಾಸಕ ಅಂಗಾರರಿಗೆ ಸಚಿವ ಸ್ಥಾನ- ಬಿಜೆಪಿ ನಿಯೋಗಕ್ಕೆ ಸಿಎಂ ಭರವಸೆ

Share

ಸುಳ್ಯ: ಮುಂದಿನ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ನಿಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ.ಸಂಸದ ನಳಿನ್‍ಕುಮಾರ್ ಕಟೀಲ್ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಸಂಜೆ ಸಿಎಂ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಸುಳ್ಯ ಕ್ಷೇತ್ರದ ಪಕ್ಷ ಸಂಘಟನೆಯ ಬಗ್ಗೆ, ಸುಳ್ಯದ ಜನತೆ ಮತ್ತು ಕಾರ್ಯಕರ್ತರ ಭಾವನೆಯ ಬಗ್ಗೆ ಚೆನ್ನಾಗಿ ಗೊತ್ತಿದೆ. ಹಿರಿಯ ಶಾಸಕರಾದ ಎಸ್.ಅಂಗಾರ ಅವರ ನಿಷ್ಠೆಯ ಬಗ್ಗೆಯೂ ಗೊತ್ತಿದೆ. ಅವರ ಬಗ್ಗೆ ಅಪಾರ ಗೌರವ ಇದೆ, ಪ್ರಥಮ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿಯೇ ಶಾಸಕ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒಲವು ಇತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿಲ್ಲ. ಮುಂದಿನ ವಿಸ್ತರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಮತ್ತು ಸುಳ್ಯ ಶಾಸಕ ಅಂಗಾರ ಅವರನ್ನು ಪ್ರಥಮ ಆದ್ಯತೆಯಲ್ಲಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಸುಳ್ಯ ಕ್ಷೇತ್ರದ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿಗಳು ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಸೆ.14 ರಂದು ಸಿಎಂ ಭೇಟಿ ಮಾಡುವುದಾಗಿ ತಿಳಿಸಲಾಗಿತ್ತು. ಇದೀಗ ಒಂದು ದಿನದ ಮೊದಲೇ ಸಿಎಂ ಭೇಟಿಗೆ ಅವಕಾಶ ಸಿಕ್ಕಿದೆ. ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ನೀಡದೆ ಇರುವುದಕ್ಕೆ ಸುಳ್ಯ ಬಿಜೆಪಿ ಅಸಹಕಾರ ಚಳವಳಿ ಘೋಷಿಸಿದ್ದರು. ಬಳಿಕ ಮುಖ್ಯಮಂತ್ರಿ ಭೇಟಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ನೀಡಿದ ಭರವಸೆ ಮೇರೆಗೆ ಅಸಹಕಾರ ಚಳವಳಿಯನ್ನು ಹಿಂಪಡೆಯಲಾಗಿತ್ತು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಮುಖಂಡರಾದ ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಎನ್.ಎ.ರಾಮಚಂದ್ರ, ಸುಧಾಕರ ಕಾಮತ್, ವಿನಯಕುಮಾರ್ ಕಂದಡ್ಕ, ದಿನೇಶ್ ಮೆದು, ರಾಕೇಶ್ ರೈ ಕೆಡೆಂಜಿ ಮತ್ತಿತರರು ನಿಯೋಗದಲ್ಲಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

4 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

5 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

20 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago