ಸುದ್ದಿಗಳು

ಮುಂದುವರಿದ ಕೊರೋನಾ ಅಬ್ಬರ | ರಾಜ್ಯದಲ್ಲಿ 4,120 ಮಂದಿಗೆ ಸೋಂಕು | ದ ಕ ಜಿಲ್ಲೆಯಲ್ಲಿ 285 ಮಂದಿಗೆ ಕೊರೋನಾ ಪಾಸಿಟಿವ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು/ಬೆಂಗಳೂರು: ಕೊರೋನಾ ಅಬ್ಬರ ಭಾನುವಾರವೂ ಮುಂದುವರಿದೆ. ಭಾನುವಾರ ರಾಜ್ಯದಲ್ಲಿ 4,120 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ 2156 ಪ್ರಕರಣಗಳು ವರದಿಯಾಗಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ285 ಮಂದಿಗೆ ಕೊರೋನಾ ಪಾಸಿಟಿವ್  ಪ್ರಕರಣ ಪತ್ತೆಯಾಗಿದೆ.

Advertisement
Advertisement

ರಾಜ್ಯದಲ್ಲಿ  4,120 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೆ ಏರಿಕೆಯಾಗಿದೆ. 1290 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 23,065 ಮಂದಿ ಗುಣಮುಖರಾಗಿದ್ದಾರೆ.  ಭಾನುವಾರ ಒಂದೇ ದಿನ  91 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,331ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರದಂದು 285 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.  104 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಜಿಲ್ಲೆಯಲ್ಲಿ 1491 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಭಾನುವಾರ ಕೊರೋನಾಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮೂಲದ 77 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕ್ಯಾನ್ಸರ್, ಅಸ್ತಮಾದಿಂದ ಬಳಲುತ್ತಿದ್ದ ಬಳಲುತ್ತಿದ್ದರು. ಮಂಗಳೂರು ಮೂಲದ 53 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯಲ್ಲಿ 134 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ.

Advertisement

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಕೊರೋನಾ ಪಾಸಿಟಿವ್‌ ಸಂಖ್ಯೆ ಹೆಚ್ಚುತ್ತಿದ್ದು ಭಾನುವಾರ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 minutes ago

ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?

ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…

34 minutes ago

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

9 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

10 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

10 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

10 hours ago