ಮಂಗಳೂರು/ಬೆಂಗಳೂರು: ಕೊರೋನಾ ಅಬ್ಬರ ಭಾನುವಾರವೂ ಮುಂದುವರಿದೆ. ಭಾನುವಾರ ರಾಜ್ಯದಲ್ಲಿ 4,120 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ 2156 ಪ್ರಕರಣಗಳು ವರದಿಯಾಗಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ285 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ರಾಜ್ಯದಲ್ಲಿ 4,120 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೆ ಏರಿಕೆಯಾಗಿದೆ. 1290 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 23,065 ಮಂದಿ ಗುಣಮುಖರಾಗಿದ್ದಾರೆ. ಭಾನುವಾರ ಒಂದೇ ದಿನ 91 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,331ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರದಂದು 285 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ. 104 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಜಿಲ್ಲೆಯಲ್ಲಿ 1491 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಕೊರೋನಾಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮೂಲದ 77 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕ್ಯಾನ್ಸರ್, ಅಸ್ತಮಾದಿಂದ ಬಳಲುತ್ತಿದ್ದ ಬಳಲುತ್ತಿದ್ದರು. ಮಂಗಳೂರು ಮೂಲದ 53 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಉಡುಪಿ ಜಿಲ್ಲೆಯಲ್ಲಿ 134 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದು ಭಾನುವಾರ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…