ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಂಪುಟ ಸಭೆಯಲ್ಲಿ ಸಚಿವ ಸ್ಥಾನ ತಪ್ಪಿ ಹೋಗಿರುವುದನ್ನು ಪ್ರತಿಭಟಿಸಿ ಸುಳ್ಯ ಬಿಜೆಪಿ ನಡೆಸುತ್ತಿರುವ ಅಸಹಕಾರ ಚಳವಳಿ ಮುಂದುವರಿದಿದೆ.
ಬಿಜೆಪಿ ಜನಪ್ರತಿನಿಧಿಗಳ ರಾಜಿನಾಮೆಯೂ ಮುಂದುವರಿಯುತ್ತಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಸಹಕಾರಿ ಸಂಘ, ಎಪಿಎಂಸಿಗಳಿಗೆ ಆಯ್ಕೆಯಾದ ಬಿಜೆಪಿ ಜನಪ್ರತಿನಿಧಿಗಳು ತಮ್ಮ ರಾಜಿನಾಮೆ ಪತ್ರವನ್ನು ಮಂಡಲ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಅಲ್ಲದೆ ಜನಪ್ರತಿನಿಧಿಗಳು ಕಚೇರಿಗಳಿಗೂ ತೆರಳುತ್ತಿಲ್ಲ. ಸುಳ್ಯ ವಿಧಾನಸಭಾ ವ್ಯಾಪ್ತಿಯಲ್ಲಿ ಇದುವರೆಗೆ ಒಟ್ಟು 318 ಮಂದಿ ಬಿಜೆಪಿ ಜನಪ್ರತಿನಿಧಿಗಳು ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.
ಶಾಸಕರಿಗೆ ಸಚಿವ ಸ್ಥಾನ ತಪ್ಪಿರುವುದರಿಂದ ಸುಳ್ಯ ಕ್ಷೇತ್ರಕ್ಕೆ ಅನ್ಯಾಯವಾಗಿದೆ. ಇದು ಸರಿ ಪಡಿಸುವವರೆಗೆ ಅಸಹಕಾರ ಚಳವಳಿಯೂ ಮುಂದುವರಿಯಲಿದೆ ಎಂದು ಅವರು ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…