ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಂಪುಟ ಸಭೆಯಲ್ಲಿ ಸಚಿವ ಸ್ಥಾನ ತಪ್ಪಿ ಹೋಗಿರುವುದನ್ನು ಪ್ರತಿಭಟಿಸಿ ಸುಳ್ಯ ಬಿಜೆಪಿ ನಡೆಸುತ್ತಿರುವ ಅಸಹಕಾರ ಚಳವಳಿ ಮುಂದುವರಿದಿದೆ.
ಬಿಜೆಪಿ ಜನಪ್ರತಿನಿಧಿಗಳ ರಾಜಿನಾಮೆಯೂ ಮುಂದುವರಿಯುತ್ತಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಸಹಕಾರಿ ಸಂಘ, ಎಪಿಎಂಸಿಗಳಿಗೆ ಆಯ್ಕೆಯಾದ ಬಿಜೆಪಿ ಜನಪ್ರತಿನಿಧಿಗಳು ತಮ್ಮ ರಾಜಿನಾಮೆ ಪತ್ರವನ್ನು ಮಂಡಲ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಅಲ್ಲದೆ ಜನಪ್ರತಿನಿಧಿಗಳು ಕಚೇರಿಗಳಿಗೂ ತೆರಳುತ್ತಿಲ್ಲ. ಸುಳ್ಯ ವಿಧಾನಸಭಾ ವ್ಯಾಪ್ತಿಯಲ್ಲಿ ಇದುವರೆಗೆ ಒಟ್ಟು 318 ಮಂದಿ ಬಿಜೆಪಿ ಜನಪ್ರತಿನಿಧಿಗಳು ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.
ಶಾಸಕರಿಗೆ ಸಚಿವ ಸ್ಥಾನ ತಪ್ಪಿರುವುದರಿಂದ ಸುಳ್ಯ ಕ್ಷೇತ್ರಕ್ಕೆ ಅನ್ಯಾಯವಾಗಿದೆ. ಇದು ಸರಿ ಪಡಿಸುವವರೆಗೆ ಅಸಹಕಾರ ಚಳವಳಿಯೂ ಮುಂದುವರಿಯಲಿದೆ ಎಂದು ಅವರು ಹೇಳಿದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…