ಸುಳ್ಯ: ಜಲಸಂರಕ್ಷಣೆಯ ಉದ್ದೇಶದಿಂದ ಮನೆಮನೆ ಇಂಗುಗುಂಡಿ ಅಭಿಯಾನ ಹಮ್ಮಿಕೊಂಡಿರುವ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಭಿಯಾನ ಮುಂದುವರಿದಿದೆ. ಕುಕ್ಕುಜಡ್ಕದ ಪ್ರೌಢಶಾಲೆ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಹಾಗೂ ಎಲಿಮಲೆ ಸರಕಾರಿ ಪ್ರೌಢಶಾಲೆ, ಕುಕ್ಕುಜಡ್ಕದ ಪ್ರೌಢಶಾಲೆ, ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಅಭಿಯಾನ ನಡೆಯಿತು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಪ್ರತಿಕ್ರಿಯೆ ನೀಡಿದರು.
ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಜಲಾಮೃತ ಯೋಜನೆಯ ಅಡಿಯಲ್ಲಿ ಮನೆಮನೆ ಇಂಗುಗುಂಡಿ ಅಭಿಯಾನ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಬುಧವಾರದಂದು ನಾಲ್ಕು ಪ್ರೌಢಶಾಲೆಗಳಲ್ಲಿ ಸುಮಾರು 650 ವಿದ್ಯಾರ್ಥಿಗಳನ್ನು ಇಂಗು ಗುಂಡಿ ನಿರ್ಮಿಸುವಂತೆ ಪ್ರೇರೇಪಿಸಲು ಸಾಧ್ಯವಾಯಿತು. ಎಲ್ಲಾ ಕಡೆಗಳಲ್ಲಿ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸದಸ್ಯರು ಸಹಕಾರ ನೀಡಿದ್ದಾರೆ. ಎಲ್ಲಾ ಶಾಲೆಗಳಲ್ಲಿ ಮಕ್ಕಳು ಇಂಗು ಗುಂಡಿ ನಿರ್ಮಿಸಲು ಸ್ವಯಂ ಪ್ರೇರಣೆ ಹೊಂದಿದ್ದಾರೆ.
ಕುಕ್ಕುಜಡ್ಕದ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳೂ ಸೇರಿ 130 ಮಂದಿ ಇದ್ದರು.
ಎಲಿಮಲೆ ಜ್ಞಾನದೀಪ ಪ್ರೌಢಶಾಲೆಯಲ್ಲಿ 250 ವಿದ್ಯಾರ್ಥಿಗಳು, ಎಲಿಮಲೆಯ ಸರಕಾರಿ ಪ್ರೌಢಶಾಲೆಯಲ್ಲಿ 190 ವಿದ್ಯಾರ್ಥಿಗಳು ಹಾಗೂ ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ 100 ವಿದ್ಯಾರ್ಥಿಗಳು ನೀರಿಂಗಿಸುವ ಬಗ್ಗೆ ಅರಿವು ನೀಡಲಾಯಿತು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…
ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…