ಸುಳ್ಯ: ಜಲಸಂರಕ್ಷಣೆಯ ಉದ್ದೇಶದಿಂದ ಮನೆಮನೆ ಇಂಗುಗುಂಡಿ ಅಭಿಯಾನ ಹಮ್ಮಿಕೊಂಡಿರುವ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಭಿಯಾನ ಮುಂದುವರಿದಿದೆ. ಕುಕ್ಕುಜಡ್ಕದ ಪ್ರೌಢಶಾಲೆ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಹಾಗೂ ಎಲಿಮಲೆ ಸರಕಾರಿ ಪ್ರೌಢಶಾಲೆ, ಕುಕ್ಕುಜಡ್ಕದ ಪ್ರೌಢಶಾಲೆ, ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಅಭಿಯಾನ ನಡೆಯಿತು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಪ್ರತಿಕ್ರಿಯೆ ನೀಡಿದರು.
ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಜಲಾಮೃತ ಯೋಜನೆಯ ಅಡಿಯಲ್ಲಿ ಮನೆಮನೆ ಇಂಗುಗುಂಡಿ ಅಭಿಯಾನ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಬುಧವಾರದಂದು ನಾಲ್ಕು ಪ್ರೌಢಶಾಲೆಗಳಲ್ಲಿ ಸುಮಾರು 650 ವಿದ್ಯಾರ್ಥಿಗಳನ್ನು ಇಂಗು ಗುಂಡಿ ನಿರ್ಮಿಸುವಂತೆ ಪ್ರೇರೇಪಿಸಲು ಸಾಧ್ಯವಾಯಿತು. ಎಲ್ಲಾ ಕಡೆಗಳಲ್ಲಿ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸದಸ್ಯರು ಸಹಕಾರ ನೀಡಿದ್ದಾರೆ. ಎಲ್ಲಾ ಶಾಲೆಗಳಲ್ಲಿ ಮಕ್ಕಳು ಇಂಗು ಗುಂಡಿ ನಿರ್ಮಿಸಲು ಸ್ವಯಂ ಪ್ರೇರಣೆ ಹೊಂದಿದ್ದಾರೆ.
ಕುಕ್ಕುಜಡ್ಕದ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳೂ ಸೇರಿ 130 ಮಂದಿ ಇದ್ದರು.
ಎಲಿಮಲೆ ಜ್ಞಾನದೀಪ ಪ್ರೌಢಶಾಲೆಯಲ್ಲಿ 250 ವಿದ್ಯಾರ್ಥಿಗಳು, ಎಲಿಮಲೆಯ ಸರಕಾರಿ ಪ್ರೌಢಶಾಲೆಯಲ್ಲಿ 190 ವಿದ್ಯಾರ್ಥಿಗಳು ಹಾಗೂ ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ 100 ವಿದ್ಯಾರ್ಥಿಗಳು ನೀರಿಂಗಿಸುವ ಬಗ್ಗೆ ಅರಿವು ನೀಡಲಾಯಿತು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…