ಸುಳ್ಯ: ಜಲಸಂರಕ್ಷಣೆಯ ಉದ್ದೇಶದಿಂದ ಮನೆಮನೆ ಇಂಗುಗುಂಡಿ ಅಭಿಯಾನ ಹಮ್ಮಿಕೊಂಡಿರುವ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಭಿಯಾನ ಮುಂದುವರಿದಿದೆ. ಕುಕ್ಕುಜಡ್ಕದ ಪ್ರೌಢಶಾಲೆ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಹಾಗೂ ಎಲಿಮಲೆ ಸರಕಾರಿ ಪ್ರೌಢಶಾಲೆ, ಕುಕ್ಕುಜಡ್ಕದ ಪ್ರೌಢಶಾಲೆ, ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಅಭಿಯಾನ ನಡೆಯಿತು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಪ್ರತಿಕ್ರಿಯೆ ನೀಡಿದರು.
ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಜಲಾಮೃತ ಯೋಜನೆಯ ಅಡಿಯಲ್ಲಿ ಮನೆಮನೆ ಇಂಗುಗುಂಡಿ ಅಭಿಯಾನ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಬುಧವಾರದಂದು ನಾಲ್ಕು ಪ್ರೌಢಶಾಲೆಗಳಲ್ಲಿ ಸುಮಾರು 650 ವಿದ್ಯಾರ್ಥಿಗಳನ್ನು ಇಂಗು ಗುಂಡಿ ನಿರ್ಮಿಸುವಂತೆ ಪ್ರೇರೇಪಿಸಲು ಸಾಧ್ಯವಾಯಿತು. ಎಲ್ಲಾ ಕಡೆಗಳಲ್ಲಿ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸದಸ್ಯರು ಸಹಕಾರ ನೀಡಿದ್ದಾರೆ. ಎಲ್ಲಾ ಶಾಲೆಗಳಲ್ಲಿ ಮಕ್ಕಳು ಇಂಗು ಗುಂಡಿ ನಿರ್ಮಿಸಲು ಸ್ವಯಂ ಪ್ರೇರಣೆ ಹೊಂದಿದ್ದಾರೆ.
ಕುಕ್ಕುಜಡ್ಕದ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳೂ ಸೇರಿ 130 ಮಂದಿ ಇದ್ದರು.
ಎಲಿಮಲೆ ಜ್ಞಾನದೀಪ ಪ್ರೌಢಶಾಲೆಯಲ್ಲಿ 250 ವಿದ್ಯಾರ್ಥಿಗಳು, ಎಲಿಮಲೆಯ ಸರಕಾರಿ ಪ್ರೌಢಶಾಲೆಯಲ್ಲಿ 190 ವಿದ್ಯಾರ್ಥಿಗಳು ಹಾಗೂ ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ 100 ವಿದ್ಯಾರ್ಥಿಗಳು ನೀರಿಂಗಿಸುವ ಬಗ್ಗೆ ಅರಿವು ನೀಡಲಾಯಿತು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…