ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಸಂಘಪರಿವಾರ, ಸಹಕಾರ ಭಾರತಿ ಹಾಗೂ ಬಿಜೆಪಿ ಸೂಚನೆಯಂತೆ ಮತದಾನದಲ್ಲಿ ಭಾಗವಹಿಸಿದ ಎಲ್ಲರೂ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಇದೀಗ ರಾಜಿನಾಮೆ ಪರ್ವ ಆರಂಭವಾಗಿದ್ದು ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ , ತಾಲೂಕು ಸಹಕಾರ ಭಾರತಿ ಅಧ್ಯಕ್ಷ ವಿಷ್ಣು ಭಟ್ ರಾಜಿನಾಮೆ ನೀಡಿದ್ದಾರೆ.
ಸಂಘದ ಸಭೆ ಕರೆದ ಬಳಿಕ ರಾಜಿನಾಮೆ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ಸಂಘದ ನಿರ್ದೇಶಕರು ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಬಗ್ಗೆ ತಿಳಿದುಬಂದಿದೆ. ಸಂಘದ ಸದಸ್ಯರ ಹಿತದೃಷ್ಠಿಯಿಂದ ಸಹಕಾರಿ ಸಂಘದ ಅಧ್ಯಕ್ಷರು ಸಾಲ ಮರುಪಾವತಿ ಹಾಗೂ ಸಾಲ ಮಂಜೂರಾತಿ ಸಂದರ್ಭ ಅಗತ್ಯವಾಗಿದೆ. ಆದರೆ ಈ ಸಂದರ್ಭ ಅಧ್ಯಕ್ಷರು ರಾಜಿನಾಮೆ ನೀಡಿದರೆ ಸದಸ್ಯರಿಗೆ ಸಮಸ್ಯೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.
ಈ ನಡುವೆ ಕಾಣಿಯೂರು ಸೇರಿದಂತೆ ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಸಹಕಾರಿ ಸಂಘದಿಂದಲೂ ಚುನಾವಣೆಯಲ್ಲಿ ಭಾಗವಹಿಸಿದವರು ರಾಜೀನಾಮೆ ನೀಡುತ್ತಿದ್ದಾರೆ.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…