ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಸಂಘಪರಿವಾರ, ಸಹಕಾರ ಭಾರತಿ ಹಾಗೂ ಬಿಜೆಪಿ ಸೂಚನೆಯಂತೆ ಮತದಾನದಲ್ಲಿ ಭಾಗವಹಿಸಿದ ಎಲ್ಲರೂ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಇದೀಗ ರಾಜಿನಾಮೆ ಪರ್ವ ಆರಂಭವಾಗಿದ್ದು ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ , ತಾಲೂಕು ಸಹಕಾರ ಭಾರತಿ ಅಧ್ಯಕ್ಷ ವಿಷ್ಣು ಭಟ್ ರಾಜಿನಾಮೆ ನೀಡಿದ್ದಾರೆ.
ಸಂಘದ ಸಭೆ ಕರೆದ ಬಳಿಕ ರಾಜಿನಾಮೆ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ಸಂಘದ ನಿರ್ದೇಶಕರು ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಬಗ್ಗೆ ತಿಳಿದುಬಂದಿದೆ. ಸಂಘದ ಸದಸ್ಯರ ಹಿತದೃಷ್ಠಿಯಿಂದ ಸಹಕಾರಿ ಸಂಘದ ಅಧ್ಯಕ್ಷರು ಸಾಲ ಮರುಪಾವತಿ ಹಾಗೂ ಸಾಲ ಮಂಜೂರಾತಿ ಸಂದರ್ಭ ಅಗತ್ಯವಾಗಿದೆ. ಆದರೆ ಈ ಸಂದರ್ಭ ಅಧ್ಯಕ್ಷರು ರಾಜಿನಾಮೆ ನೀಡಿದರೆ ಸದಸ್ಯರಿಗೆ ಸಮಸ್ಯೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.
ಈ ನಡುವೆ ಕಾಣಿಯೂರು ಸೇರಿದಂತೆ ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಸಹಕಾರಿ ಸಂಘದಿಂದಲೂ ಚುನಾವಣೆಯಲ್ಲಿ ಭಾಗವಹಿಸಿದವರು ರಾಜೀನಾಮೆ ನೀಡುತ್ತಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…