ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಸಂಘಪರಿವಾರ, ಸಹಕಾರ ಭಾರತಿ ಹಾಗೂ ಬಿಜೆಪಿ ಸೂಚನೆಯಂತೆ ಮತದಾನದಲ್ಲಿ ಭಾಗವಹಿಸಿದ ಎಲ್ಲರೂ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಇದೀಗ ರಾಜಿನಾಮೆ ಪರ್ವ ಆರಂಭವಾಗಿದ್ದು ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ , ತಾಲೂಕು ಸಹಕಾರ ಭಾರತಿ ಅಧ್ಯಕ್ಷ ವಿಷ್ಣು ಭಟ್ ರಾಜಿನಾಮೆ ನೀಡಿದ್ದಾರೆ.
ಸಂಘದ ಸಭೆ ಕರೆದ ಬಳಿಕ ರಾಜಿನಾಮೆ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ಸಂಘದ ನಿರ್ದೇಶಕರು ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಬಗ್ಗೆ ತಿಳಿದುಬಂದಿದೆ. ಸಂಘದ ಸದಸ್ಯರ ಹಿತದೃಷ್ಠಿಯಿಂದ ಸಹಕಾರಿ ಸಂಘದ ಅಧ್ಯಕ್ಷರು ಸಾಲ ಮರುಪಾವತಿ ಹಾಗೂ ಸಾಲ ಮಂಜೂರಾತಿ ಸಂದರ್ಭ ಅಗತ್ಯವಾಗಿದೆ. ಆದರೆ ಈ ಸಂದರ್ಭ ಅಧ್ಯಕ್ಷರು ರಾಜಿನಾಮೆ ನೀಡಿದರೆ ಸದಸ್ಯರಿಗೆ ಸಮಸ್ಯೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.
ಈ ನಡುವೆ ಕಾಣಿಯೂರು ಸೇರಿದಂತೆ ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಸಹಕಾರಿ ಸಂಘದಿಂದಲೂ ಚುನಾವಣೆಯಲ್ಲಿ ಭಾಗವಹಿಸಿದವರು ರಾಜೀನಾಮೆ ನೀಡುತ್ತಿದ್ದಾರೆ.
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…