ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಸಂಘಪರಿವಾರ, ಸಹಕಾರ ಭಾರತಿ ಹಾಗೂ ಬಿಜೆಪಿ ಸೂಚನೆಯಂತೆ ಮತದಾನದಲ್ಲಿ ಭಾಗವಹಿಸಿದ ಎಲ್ಲರೂ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಇದೀಗ ರಾಜಿನಾಮೆ ಪರ್ವ ಆರಂಭವಾಗಿದ್ದು ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ , ತಾಲೂಕು ಸಹಕಾರ ಭಾರತಿ ಅಧ್ಯಕ್ಷ ವಿಷ್ಣು ಭಟ್ ರಾಜಿನಾಮೆ ನೀಡಿದ್ದಾರೆ.
ಸಂಘದ ಸಭೆ ಕರೆದ ಬಳಿಕ ರಾಜಿನಾಮೆ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ಸಂಘದ ನಿರ್ದೇಶಕರು ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಬಗ್ಗೆ ತಿಳಿದುಬಂದಿದೆ. ಸಂಘದ ಸದಸ್ಯರ ಹಿತದೃಷ್ಠಿಯಿಂದ ಸಹಕಾರಿ ಸಂಘದ ಅಧ್ಯಕ್ಷರು ಸಾಲ ಮರುಪಾವತಿ ಹಾಗೂ ಸಾಲ ಮಂಜೂರಾತಿ ಸಂದರ್ಭ ಅಗತ್ಯವಾಗಿದೆ. ಆದರೆ ಈ ಸಂದರ್ಭ ಅಧ್ಯಕ್ಷರು ರಾಜಿನಾಮೆ ನೀಡಿದರೆ ಸದಸ್ಯರಿಗೆ ಸಮಸ್ಯೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.
ಈ ನಡುವೆ ಕಾಣಿಯೂರು ಸೇರಿದಂತೆ ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಸಹಕಾರಿ ಸಂಘದಿಂದಲೂ ಚುನಾವಣೆಯಲ್ಲಿ ಭಾಗವಹಿಸಿದವರು ರಾಜೀನಾಮೆ ನೀಡುತ್ತಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…