ಮುಕ್ಕೂರು ಅಂಚೆ ಕಚೇರಿ ಪುನಾರಂಭ : ಪಕ್ಷಾತೀತ ಹೋರಾಟಕ್ಕೆ ಸಂದ ಗೆಲುವು : ಕುಂಬ್ರ ದಯಾಕರ ಆಳ್ವ

June 16, 2019
10:00 AM

ಮುಕ್ಕೂರು : ಕಳೆದ 55 ವರ್ಷಗಳಿಂದ ಮುಕ್ಕೂರಿಗ ಭಾಗವಾಗಿದ್ದ ಅಂಚೆ ಕಚೇರಿ ಸ್ಥಳಾಂತರದ ವಿರುದ್ಧ ಗ್ರಾಮಸ್ಥರು ಜಾತಿ, ಮತ, ಧರ್ಮ ಬೇಧವಿಲ್ಲದೆ ಹೋರಾಟ ನಡೆಸಿದ ಕಾರಣ ಅಂಚೆ ಕಚೇರಿ ಮರಳಿ ಮುಕ್ಕೂರಿನಲ್ಲಿ ಪುನಾರಂಭಗೊಂಡಿದೆ. ಇದು ನಮ್ಮೆಲ್ಲರ ಪಕ್ಷಾತೀತ ಪ್ರಯತ್ನಕ್ಕೆ ಸಂದ ಗೆಲುವು ಎಂದು ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಹೇಳಿದರು.

ಪೆರುವಾಜೆ ಗ್ರಾ.ಪಂ.ಕಟ್ಟಡದಿಂದ ಮರಳಿ ಮುಕ್ಕೂರಿಗೆ ಅಂಚೆ ಕಚೇರಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಶ್ರಮಿಸಿದ ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ವತಿಯಿಂದ ಶನಿವಾರ ನಡೆದ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಈ ಒಗ್ಗಟ್ಟು ಅಂಚೆ ಕಚೇರಿ ಉಳಿವಿಗೆ ಮಾತ್ರ ಸೀಮಿತವಲ್ಲ. ಮುಕ್ಕೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಸದಾ ಕಾಲ ಇರಬೇಕು ಎಂದರು.

ಅಂಚೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಉಮೇಶ್ ಕೆಎಂಬಿ ಮಾತನಾಡಿ, ಯಾವುದೇ ಮಾಹಿತಿ ನೀಡದೆ ಉದ್ದೇಶಪೂರ್ವಕವಾಗಿ ಅಂಚೆ ಕಚೇರಿ ಸ್ಥಳಾಂತಿರಿಸಿದ್ದು ಇಲ್ಲಿನ ಗ್ರಾಮಸ್ಥರಿಗೆ ನೋವು ತಂದಿತ್ತು. ಹೋರಾಟ ಸಮಿತಿ, ಗ್ರಾಮಸ್ಥರು, ಸಂಸದ ನಳಿನ್ ಕುಮಾರ್ ಕಟೀಲು ಅವರ ಸಹಕಾರದಿಂದ ಪುನಃ ಮುಕ್ಕೂರಿನಲ್ಲಿ ಅಂಚೆ ಕಚೇರಿ ತೆರೆಯುವಂತಾಗಿದೆ ಎಂದರು.

ಅಂಚೆ ಉಳಿಸಿ ಹೋರಾಟ ಸಮಿತಿ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ಕಾನಾವು, ಸದಸ್ಯ ತಿರುಮಲೇಶ್ವರ ಭಟ್ ಕಾನಾವು ಮಾತನಾಡಿ ಗ್ರಾಮಸ್ಥರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು ಎಂದರು.

ಈ ಸಂದರ್ಭ ಮುಕ್ಕೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ನಿವೃತ್ತ ಕಂದಾಯ ನಿರೀಕ್ಷಕ ದಾಮೋದರ ಗೌಡ, ಹೋರಾಟ ಸಮಿತಿಯ ಕುಶಾಲಪ್ಪ ಗೌಡ ಪೆರುವಾಜೆ, ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಗುಡ್ಡಪ್ಪ ಗೌಡ ಅಡ್ಯತಕಂಡ, ಮಂಜುನಾಥ ಗೌಡ ಕಂಡಿಪ್ಪಾಡಿ, ದಯಾನಂದ ಜಾಲು, ಮುಕ್ಕೂರು ಕುಂಡಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸದಸ್ಯರಾದ ಜಯಂತ ಕುಂಡಡ್ಕ, ರವೀಂದ್ರ ಅನವುಗುಂಡಿ, ಅಬ್ದುಲ್ ರಹಿಮಾನ್, ಇಬ್ರಾಹಿಂ ಮುಕ್ಕೂರು, ಕಿರಣ್ ಚಾಮುಂಡಿಮೂಲೆ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror