ಮುಕ್ಕೂರು : ಕಳೆದ 55 ವರ್ಷಗಳಿಂದ ಮುಕ್ಕೂರಿಗ ಭಾಗವಾಗಿದ್ದ ಅಂಚೆ ಕಚೇರಿ ಸ್ಥಳಾಂತರದ ವಿರುದ್ಧ ಗ್ರಾಮಸ್ಥರು ಜಾತಿ, ಮತ, ಧರ್ಮ ಬೇಧವಿಲ್ಲದೆ ಹೋರಾಟ ನಡೆಸಿದ ಕಾರಣ ಅಂಚೆ ಕಚೇರಿ ಮರಳಿ ಮುಕ್ಕೂರಿನಲ್ಲಿ ಪುನಾರಂಭಗೊಂಡಿದೆ. ಇದು ನಮ್ಮೆಲ್ಲರ ಪಕ್ಷಾತೀತ ಪ್ರಯತ್ನಕ್ಕೆ ಸಂದ ಗೆಲುವು ಎಂದು ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಹೇಳಿದರು.
ಪೆರುವಾಜೆ ಗ್ರಾ.ಪಂ.ಕಟ್ಟಡದಿಂದ ಮರಳಿ ಮುಕ್ಕೂರಿಗೆ ಅಂಚೆ ಕಚೇರಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಶ್ರಮಿಸಿದ ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ವತಿಯಿಂದ ಶನಿವಾರ ನಡೆದ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಈ ಒಗ್ಗಟ್ಟು ಅಂಚೆ ಕಚೇರಿ ಉಳಿವಿಗೆ ಮಾತ್ರ ಸೀಮಿತವಲ್ಲ. ಮುಕ್ಕೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಸದಾ ಕಾಲ ಇರಬೇಕು ಎಂದರು.
ಅಂಚೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಉಮೇಶ್ ಕೆಎಂಬಿ ಮಾತನಾಡಿ, ಯಾವುದೇ ಮಾಹಿತಿ ನೀಡದೆ ಉದ್ದೇಶಪೂರ್ವಕವಾಗಿ ಅಂಚೆ ಕಚೇರಿ ಸ್ಥಳಾಂತಿರಿಸಿದ್ದು ಇಲ್ಲಿನ ಗ್ರಾಮಸ್ಥರಿಗೆ ನೋವು ತಂದಿತ್ತು. ಹೋರಾಟ ಸಮಿತಿ, ಗ್ರಾಮಸ್ಥರು, ಸಂಸದ ನಳಿನ್ ಕುಮಾರ್ ಕಟೀಲು ಅವರ ಸಹಕಾರದಿಂದ ಪುನಃ ಮುಕ್ಕೂರಿನಲ್ಲಿ ಅಂಚೆ ಕಚೇರಿ ತೆರೆಯುವಂತಾಗಿದೆ ಎಂದರು.
ಅಂಚೆ ಉಳಿಸಿ ಹೋರಾಟ ಸಮಿತಿ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ಕಾನಾವು, ಸದಸ್ಯ ತಿರುಮಲೇಶ್ವರ ಭಟ್ ಕಾನಾವು ಮಾತನಾಡಿ ಗ್ರಾಮಸ್ಥರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು ಎಂದರು.
ಈ ಸಂದರ್ಭ ಮುಕ್ಕೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ನಿವೃತ್ತ ಕಂದಾಯ ನಿರೀಕ್ಷಕ ದಾಮೋದರ ಗೌಡ, ಹೋರಾಟ ಸಮಿತಿಯ ಕುಶಾಲಪ್ಪ ಗೌಡ ಪೆರುವಾಜೆ, ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಗುಡ್ಡಪ್ಪ ಗೌಡ ಅಡ್ಯತಕಂಡ, ಮಂಜುನಾಥ ಗೌಡ ಕಂಡಿಪ್ಪಾಡಿ, ದಯಾನಂದ ಜಾಲು, ಮುಕ್ಕೂರು ಕುಂಡಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸದಸ್ಯರಾದ ಜಯಂತ ಕುಂಡಡ್ಕ, ರವೀಂದ್ರ ಅನವುಗುಂಡಿ, ಅಬ್ದುಲ್ ರಹಿಮಾನ್, ಇಬ್ರಾಹಿಂ ಮುಕ್ಕೂರು, ಕಿರಣ್ ಚಾಮುಂಡಿಮೂಲೆ ಮೊದಲಾದವರು ಉಪಸ್ಥಿತರಿದ್ದರು.
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…