Advertisement
ಸುದ್ದಿಗಳು

ಮುಕ್ಕೂರು ಅಂಚೆ ಕಚೇರಿ ಪುನಾರಂಭ : ಪಕ್ಷಾತೀತ ಹೋರಾಟಕ್ಕೆ ಸಂದ ಗೆಲುವು : ಕುಂಬ್ರ ದಯಾಕರ ಆಳ್ವ

Share

ಮುಕ್ಕೂರು : ಕಳೆದ 55 ವರ್ಷಗಳಿಂದ ಮುಕ್ಕೂರಿಗ ಭಾಗವಾಗಿದ್ದ ಅಂಚೆ ಕಚೇರಿ ಸ್ಥಳಾಂತರದ ವಿರುದ್ಧ ಗ್ರಾಮಸ್ಥರು ಜಾತಿ, ಮತ, ಧರ್ಮ ಬೇಧವಿಲ್ಲದೆ ಹೋರಾಟ ನಡೆಸಿದ ಕಾರಣ ಅಂಚೆ ಕಚೇರಿ ಮರಳಿ ಮುಕ್ಕೂರಿನಲ್ಲಿ ಪುನಾರಂಭಗೊಂಡಿದೆ. ಇದು ನಮ್ಮೆಲ್ಲರ ಪಕ್ಷಾತೀತ ಪ್ರಯತ್ನಕ್ಕೆ ಸಂದ ಗೆಲುವು ಎಂದು ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಹೇಳಿದರು.

ಪೆರುವಾಜೆ ಗ್ರಾ.ಪಂ.ಕಟ್ಟಡದಿಂದ ಮರಳಿ ಮುಕ್ಕೂರಿಗೆ ಅಂಚೆ ಕಚೇರಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಶ್ರಮಿಸಿದ ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ವತಿಯಿಂದ ಶನಿವಾರ ನಡೆದ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಈ ಒಗ್ಗಟ್ಟು ಅಂಚೆ ಕಚೇರಿ ಉಳಿವಿಗೆ ಮಾತ್ರ ಸೀಮಿತವಲ್ಲ. ಮುಕ್ಕೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಸದಾ ಕಾಲ ಇರಬೇಕು ಎಂದರು.

ಅಂಚೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಉಮೇಶ್ ಕೆಎಂಬಿ ಮಾತನಾಡಿ, ಯಾವುದೇ ಮಾಹಿತಿ ನೀಡದೆ ಉದ್ದೇಶಪೂರ್ವಕವಾಗಿ ಅಂಚೆ ಕಚೇರಿ ಸ್ಥಳಾಂತಿರಿಸಿದ್ದು ಇಲ್ಲಿನ ಗ್ರಾಮಸ್ಥರಿಗೆ ನೋವು ತಂದಿತ್ತು. ಹೋರಾಟ ಸಮಿತಿ, ಗ್ರಾಮಸ್ಥರು, ಸಂಸದ ನಳಿನ್ ಕುಮಾರ್ ಕಟೀಲು ಅವರ ಸಹಕಾರದಿಂದ ಪುನಃ ಮುಕ್ಕೂರಿನಲ್ಲಿ ಅಂಚೆ ಕಚೇರಿ ತೆರೆಯುವಂತಾಗಿದೆ ಎಂದರು.

ಅಂಚೆ ಉಳಿಸಿ ಹೋರಾಟ ಸಮಿತಿ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ಕಾನಾವು, ಸದಸ್ಯ ತಿರುಮಲೇಶ್ವರ ಭಟ್ ಕಾನಾವು ಮಾತನಾಡಿ ಗ್ರಾಮಸ್ಥರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು ಎಂದರು.

ಈ ಸಂದರ್ಭ ಮುಕ್ಕೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ನಿವೃತ್ತ ಕಂದಾಯ ನಿರೀಕ್ಷಕ ದಾಮೋದರ ಗೌಡ, ಹೋರಾಟ ಸಮಿತಿಯ ಕುಶಾಲಪ್ಪ ಗೌಡ ಪೆರುವಾಜೆ, ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಗುಡ್ಡಪ್ಪ ಗೌಡ ಅಡ್ಯತಕಂಡ, ಮಂಜುನಾಥ ಗೌಡ ಕಂಡಿಪ್ಪಾಡಿ, ದಯಾನಂದ ಜಾಲು, ಮುಕ್ಕೂರು ಕುಂಡಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸದಸ್ಯರಾದ ಜಯಂತ ಕುಂಡಡ್ಕ, ರವೀಂದ್ರ ಅನವುಗುಂಡಿ, ಅಬ್ದುಲ್ ರಹಿಮಾನ್, ಇಬ್ರಾಹಿಂ ಮುಕ್ಕೂರು, ಕಿರಣ್ ಚಾಮುಂಡಿಮೂಲೆ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

4 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

6 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

10 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

21 hours ago