Advertisement
ಸುದ್ದಿಗಳು

ಮುಕ್ಕೂರು :ಅಂಚೆ ಕಚೇರಿ ಸ್ಥಳಾಂತರ ವಿರುದ್ಧ ಗ್ರಾಮಸ್ಥರ ಸಭೆ

Share

ಬೆಳ್ಳಾರೆ : ಪೆರುವಾಜೆ ಗ್ರಾಮದ ಮುಕ್ಕೂರು ಅಂಚೆ ಕಚೇರಿಯನ್ನು ಗ್ರಾಹಕರಿಗೆ ಮಾಹಿತಿ ನೀಡದೆ ಏಕಾಏಕಿಯಾಗಿ ಸ್ಥಳಾಂತರಿಸಿದ್ದು, ಇದನ್ನು ಪುನಃ ಮುಕ್ಕೂರಿನಲ್ಲಿ ಆರಂಭಿಸುವ ತನಕ ವಿರಮಿಸದೆ ಹೋರಾಟ ನಡೆಸಲು ಮುಕ್ಕೂರಿನಲ್ಲಿ ಮಂಗಳವಾರ ಸ್ಥಳಾಂತರ ವಿರೋಧಿಸಿ ನಡೆದ ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ, ಗ್ರಾಮಸ್ಥರ ಸಭೆಯಲ್ಲಿ ನಿರ್ಧರಿಸಲಾಯಿತು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಾತನಾಡಿ, 55 ವರ್ಷಕ್ಕೂ ಅಧಿಕ ಕಾಲ ಮುಕ್ಕೂರಿನಲ್ಲಿದ್ದ ಅಂಚೆ ಕಚೇರಿಯನ್ನು ಗ್ರಾಹಕರಿಗೆ ಮಾಹಿತಿ ಕೊಡದೆ ಪೆರುವಾಜೆ ಗ್ರಾ.ಪಂ.ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಇದಕ್ಕೆ ಇಲ್ಲಿನ ಗ್ರಾಮಸ್ಥರ ವಿರೋಧವಿದೆ. ಅಂಚೆ ಕಚೇರಿ ಪುನಾರರಂಭದ ತನಕ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದರು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ತಿರುಮಲೇಶ್ವರ ಭಟ್ ಕಾನಾವು, ಮುಕ್ಕೂರಿನಲ್ಲಿ ಇರುವ ಸೌಲಭ್ಯಗಳನ್ನು ಕಸಿದುಕೊಳ್ಳಲಾಗುತ್ತಿದೆ. ಹಿಂದೆ ಸೊಸೈಟಿ, ಈಗ ಅಂಚೆ ಕಚೇರಿ ಸ್ಥಳಾಂತರಿಸುವ ಮೂಲಕ ಊರನ್ನು ಸೌಲಭ್ಯ ರಹಿತವನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ. ಇದರ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಮುಕ್ಕೂರಿನಲ್ಲಿ ಅಂಚೆ ಕಚೇರಿ ಮರು ಸ್ಥಾಪಿಸಬೇಕು ಎಂಬ ನಮ್ಮ ಬೇಡಿಕೆ ಈಡೇರಲೆಬೇಕು ಎಂದು ಅವರು ಆಗ್ರಹಿಸಿದರು.

ಪೆರುವಾಜೆ ಗ್ರಾ.ಪಂ.ಸದಸ್ಯ, ಹೋರಾಟ ಸಮಿತಿ ಅಧ್ಯಕ್ಷ ಉಮೇಶ್ ಕೆಎಂಬಿ ಮಾತನಾಡಿ, ನಾನು ಈ ಭಾಗದ ಗ್ರಾ.ಪಂ.ಸದಸ್ಯನಾಗಿದ್ದು, ಅಂಚೆ ಕಚೇರಿಯನ್ನು ಪೆರುವಾಜೆ ಗ್ರಾ.ಪಂ.ಕಟ್ಟಡಕ್ಕೆ ಸ್ಥಳಾಂತರಿಸುವ ಬಗ್ಗೆ ನನಗೆ ಯಾರು ಕೂಡ ಮಾಹಿತಿ ನೀಡಿಲ್ಲ. ಉದ್ದೇಶಪೂರ್ವಕವಾಗಿಯೇ ದಿಢೀರ್ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಪುತ್ತೂರು ಅಂಚೆ ಕಚೇರಿಗೆ ನಿಯೋಗದ ಮೂಲಕ ತೆರಳಿ ಮನವಿ ಮಾಡಲಾಗಿದೆ. ಸಂಸದರು ಕೂಡ ಮುಕ್ಕೂರಿನಲ್ಲಿ ಅಂಚೆ ಕಚೇರಿ ಮರು ಆರಂಬಿಸುವಂತೆ ಅ„ಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಆರಂಭಿಸದಿದ್ದರೆ ಮುಂದೆ ಯಾವುದೇ ಹೋರಾಟಕ್ಕೆ ಸಿದ್ದ ಎಂದರು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಗಣೇಶ ಶೆಟ್ಟಿ ಕುಂಜಾಡಿ, ಒಗ್ಗಟ್ಟಿನ ಹೋರಾಟದ ಆವಶ್ಯಕತೆ ಇದೆ. ಇಂತಹ ಸಂದರ್ಭ ಬಂದಾಗ ಪ್ರತಿಯೊಬ್ಬರು ಸೇರಿ ಧ್ವನಿ ಎತ್ತಬೇಕು. ಇಲ್ಲಿ ಸೌಲಭ್ಯ ಉಳಿಸುವುದಕ್ಕೂ, ಸ್ಥಳಾಂತರಿಸುವುದಕ್ಕೂ ನಾವೇ ಜವಬ್ದಾರರು. ಅಂಚೆ ಕಚೇರಿ, ಸೊಸೈಟಿ, ಶಾಲೆ ಉಳಿಸುವಲ್ಲಿ ಗ್ರಾಮಸ್ಥರ ಪಾತ್ರ ಏನು ಎನ್ನುವ ಬಗ್ಗೆ ಅರ್ಥೈಸಿಕೊಂಡು ಸಹಕಾರ ನೀಡಬೇಕು. ಅಂಚೆ ಕಚೇರಿ ಮರಳಿ ಆರಂಭಿಸುವ ಹೋರಾಟಕ್ಕೆ ಪೂರ್ಣ ಸಹಕಾರ ನೀಡಲಾಗುವುದು ಎಂದರು.

ಜೂ.7 : ನಿಯೋಗ ತೆರಳಲು ನಿರ್ಧಾರ: 

ಪುತ್ತೂರು ಅಂಚೆ ವಿಭಾಗದಲ್ಲಿ ಜೂ.7 ರಂದು ನಡೆಯಲಿರುವ ಅಂಚೆ ಅದಾಲತ್‍ನಲ್ಲಿ ಮುಕ್ಕೂರು ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ವತಿಯಿಂದ ನಿಯೋಗ ತೆರಳಿ ಮುಕ್ಕೂರಿನಲ್ಲಿ ಅಂಚೆ ಕಚೇರಿ ಪುನಾರರಂಭಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಮುಂದಿನ ಹೋರಾಟಕ್ಕಾಗಿ ಸಮಿತಿ ರಚಿಸಲಾಯಿತು.
ಅರ್ಧ ಶತಮಾನಕ್ಕೂ ಅಧಿಕ ಕಾಲ ಪೆರುವಾಜೆ ಗ್ರಾಮದ ಮುಕ್ಕೂರಿನಲ್ಲಿದ್ದ ಅಂಚೆ ಕಚೇರಿಯನ್ನು ಪೆರುವಾಜೆ ಗ್ರಾ.ಪಂ.ಕಟ್ಟಡಕ್ಕೆ ಸ್ಥಳಾಂತರಿಸಿರುವುದಕ್ಕೆ ಎಲ್ಲರ ವಿರೋಧವಿದೆ. ಪೆರುವಾಜೆಯಲ್ಲಿ ಹೊಸ ಅಂಚೆ ಕಚೇರಿ ತೆರಯಲಿ. ಅದಕ್ಕೆ ನಮ್ಮ ವಿರೋಧವಿಲ್ಲ. ಮುಕ್ಕೂರಿನಿಂದ ಸ್ಥಳಾಂತಿರಿಸಿರುವುದು ಈ ಊರನ್ನು ಮೂಲ ಸೌಲಭ್ಯ ರಹಿತವನ್ನಾಗಿಸಬೇಕು ಎಂಬ ಷಡ್ಯಂತ್ರ ಎಂಬ ಅನುಮಾನ ಇದೆ ಸಭೆಯಲ್ಲಿ ಪಾಲ್ಗೊಂಡ ಹೋರಾಟ ಸಮಿತಿ ಪದಾಧಿಕಾರಿಗಳು ಹೇಳಿದರು.

ಸಭೆಯಲ್ಲಿ ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ಕಾನಾವು, ಕಾರ್ಯದರ್ಶಿ ಸತ್ಯಪ್ರಸಾದ್ ಕಂಡಿಪ್ಪಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಧಾಕರ ರೈ ಕುಂಜಾಡಿ, ದಾಮೋದರ ಗೌಡ ಕಂಡಿಪ್ಪಾಡಿ, ಗುಡ್ಡಪ್ಪ ಗೌಡ ಅಡ್ಯತಕಂಡ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

5 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

11 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

12 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

12 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

20 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

21 hours ago