Advertisement
ಸುದ್ದಿಗಳು

ಮುಕ್ಕೂರು :ಅಂಚೆ ಕಚೇರಿ ಸ್ಥಳಾಂತರ ವಿರುದ್ಧ ಗ್ರಾಮಸ್ಥರ ಸಭೆ

Share

ಬೆಳ್ಳಾರೆ : ಪೆರುವಾಜೆ ಗ್ರಾಮದ ಮುಕ್ಕೂರು ಅಂಚೆ ಕಚೇರಿಯನ್ನು ಗ್ರಾಹಕರಿಗೆ ಮಾಹಿತಿ ನೀಡದೆ ಏಕಾಏಕಿಯಾಗಿ ಸ್ಥಳಾಂತರಿಸಿದ್ದು, ಇದನ್ನು ಪುನಃ ಮುಕ್ಕೂರಿನಲ್ಲಿ ಆರಂಭಿಸುವ ತನಕ ವಿರಮಿಸದೆ ಹೋರಾಟ ನಡೆಸಲು ಮುಕ್ಕೂರಿನಲ್ಲಿ ಮಂಗಳವಾರ ಸ್ಥಳಾಂತರ ವಿರೋಧಿಸಿ ನಡೆದ ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ, ಗ್ರಾಮಸ್ಥರ ಸಭೆಯಲ್ಲಿ ನಿರ್ಧರಿಸಲಾಯಿತು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಾತನಾಡಿ, 55 ವರ್ಷಕ್ಕೂ ಅಧಿಕ ಕಾಲ ಮುಕ್ಕೂರಿನಲ್ಲಿದ್ದ ಅಂಚೆ ಕಚೇರಿಯನ್ನು ಗ್ರಾಹಕರಿಗೆ ಮಾಹಿತಿ ಕೊಡದೆ ಪೆರುವಾಜೆ ಗ್ರಾ.ಪಂ.ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಇದಕ್ಕೆ ಇಲ್ಲಿನ ಗ್ರಾಮಸ್ಥರ ವಿರೋಧವಿದೆ. ಅಂಚೆ ಕಚೇರಿ ಪುನಾರರಂಭದ ತನಕ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದರು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ತಿರುಮಲೇಶ್ವರ ಭಟ್ ಕಾನಾವು, ಮುಕ್ಕೂರಿನಲ್ಲಿ ಇರುವ ಸೌಲಭ್ಯಗಳನ್ನು ಕಸಿದುಕೊಳ್ಳಲಾಗುತ್ತಿದೆ. ಹಿಂದೆ ಸೊಸೈಟಿ, ಈಗ ಅಂಚೆ ಕಚೇರಿ ಸ್ಥಳಾಂತರಿಸುವ ಮೂಲಕ ಊರನ್ನು ಸೌಲಭ್ಯ ರಹಿತವನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ. ಇದರ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಮುಕ್ಕೂರಿನಲ್ಲಿ ಅಂಚೆ ಕಚೇರಿ ಮರು ಸ್ಥಾಪಿಸಬೇಕು ಎಂಬ ನಮ್ಮ ಬೇಡಿಕೆ ಈಡೇರಲೆಬೇಕು ಎಂದು ಅವರು ಆಗ್ರಹಿಸಿದರು.

ಪೆರುವಾಜೆ ಗ್ರಾ.ಪಂ.ಸದಸ್ಯ, ಹೋರಾಟ ಸಮಿತಿ ಅಧ್ಯಕ್ಷ ಉಮೇಶ್ ಕೆಎಂಬಿ ಮಾತನಾಡಿ, ನಾನು ಈ ಭಾಗದ ಗ್ರಾ.ಪಂ.ಸದಸ್ಯನಾಗಿದ್ದು, ಅಂಚೆ ಕಚೇರಿಯನ್ನು ಪೆರುವಾಜೆ ಗ್ರಾ.ಪಂ.ಕಟ್ಟಡಕ್ಕೆ ಸ್ಥಳಾಂತರಿಸುವ ಬಗ್ಗೆ ನನಗೆ ಯಾರು ಕೂಡ ಮಾಹಿತಿ ನೀಡಿಲ್ಲ. ಉದ್ದೇಶಪೂರ್ವಕವಾಗಿಯೇ ದಿಢೀರ್ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಪುತ್ತೂರು ಅಂಚೆ ಕಚೇರಿಗೆ ನಿಯೋಗದ ಮೂಲಕ ತೆರಳಿ ಮನವಿ ಮಾಡಲಾಗಿದೆ. ಸಂಸದರು ಕೂಡ ಮುಕ್ಕೂರಿನಲ್ಲಿ ಅಂಚೆ ಕಚೇರಿ ಮರು ಆರಂಬಿಸುವಂತೆ ಅ„ಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಆರಂಭಿಸದಿದ್ದರೆ ಮುಂದೆ ಯಾವುದೇ ಹೋರಾಟಕ್ಕೆ ಸಿದ್ದ ಎಂದರು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಗಣೇಶ ಶೆಟ್ಟಿ ಕುಂಜಾಡಿ, ಒಗ್ಗಟ್ಟಿನ ಹೋರಾಟದ ಆವಶ್ಯಕತೆ ಇದೆ. ಇಂತಹ ಸಂದರ್ಭ ಬಂದಾಗ ಪ್ರತಿಯೊಬ್ಬರು ಸೇರಿ ಧ್ವನಿ ಎತ್ತಬೇಕು. ಇಲ್ಲಿ ಸೌಲಭ್ಯ ಉಳಿಸುವುದಕ್ಕೂ, ಸ್ಥಳಾಂತರಿಸುವುದಕ್ಕೂ ನಾವೇ ಜವಬ್ದಾರರು. ಅಂಚೆ ಕಚೇರಿ, ಸೊಸೈಟಿ, ಶಾಲೆ ಉಳಿಸುವಲ್ಲಿ ಗ್ರಾಮಸ್ಥರ ಪಾತ್ರ ಏನು ಎನ್ನುವ ಬಗ್ಗೆ ಅರ್ಥೈಸಿಕೊಂಡು ಸಹಕಾರ ನೀಡಬೇಕು. ಅಂಚೆ ಕಚೇರಿ ಮರಳಿ ಆರಂಭಿಸುವ ಹೋರಾಟಕ್ಕೆ ಪೂರ್ಣ ಸಹಕಾರ ನೀಡಲಾಗುವುದು ಎಂದರು.

ಜೂ.7 : ನಿಯೋಗ ತೆರಳಲು ನಿರ್ಧಾರ: 

ಪುತ್ತೂರು ಅಂಚೆ ವಿಭಾಗದಲ್ಲಿ ಜೂ.7 ರಂದು ನಡೆಯಲಿರುವ ಅಂಚೆ ಅದಾಲತ್‍ನಲ್ಲಿ ಮುಕ್ಕೂರು ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ವತಿಯಿಂದ ನಿಯೋಗ ತೆರಳಿ ಮುಕ್ಕೂರಿನಲ್ಲಿ ಅಂಚೆ ಕಚೇರಿ ಪುನಾರರಂಭಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಮುಂದಿನ ಹೋರಾಟಕ್ಕಾಗಿ ಸಮಿತಿ ರಚಿಸಲಾಯಿತು.
ಅರ್ಧ ಶತಮಾನಕ್ಕೂ ಅಧಿಕ ಕಾಲ ಪೆರುವಾಜೆ ಗ್ರಾಮದ ಮುಕ್ಕೂರಿನಲ್ಲಿದ್ದ ಅಂಚೆ ಕಚೇರಿಯನ್ನು ಪೆರುವಾಜೆ ಗ್ರಾ.ಪಂ.ಕಟ್ಟಡಕ್ಕೆ ಸ್ಥಳಾಂತರಿಸಿರುವುದಕ್ಕೆ ಎಲ್ಲರ ವಿರೋಧವಿದೆ. ಪೆರುವಾಜೆಯಲ್ಲಿ ಹೊಸ ಅಂಚೆ ಕಚೇರಿ ತೆರಯಲಿ. ಅದಕ್ಕೆ ನಮ್ಮ ವಿರೋಧವಿಲ್ಲ. ಮುಕ್ಕೂರಿನಿಂದ ಸ್ಥಳಾಂತಿರಿಸಿರುವುದು ಈ ಊರನ್ನು ಮೂಲ ಸೌಲಭ್ಯ ರಹಿತವನ್ನಾಗಿಸಬೇಕು ಎಂಬ ಷಡ್ಯಂತ್ರ ಎಂಬ ಅನುಮಾನ ಇದೆ ಸಭೆಯಲ್ಲಿ ಪಾಲ್ಗೊಂಡ ಹೋರಾಟ ಸಮಿತಿ ಪದಾಧಿಕಾರಿಗಳು ಹೇಳಿದರು.

ಸಭೆಯಲ್ಲಿ ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ಕಾನಾವು, ಕಾರ್ಯದರ್ಶಿ ಸತ್ಯಪ್ರಸಾದ್ ಕಂಡಿಪ್ಪಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಧಾಕರ ರೈ ಕುಂಜಾಡಿ, ದಾಮೋದರ ಗೌಡ ಕಂಡಿಪ್ಪಾಡಿ, ಗುಡ್ಡಪ್ಪ ಗೌಡ ಅಡ್ಯತಕಂಡ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

4 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

5 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

5 hours ago

ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…

5 hours ago

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…

5 hours ago

ಹೊಳೆಹೊನ್ನೂರು ಅಡಿಕೆ ಕಳ್ಳತನ ದೊಡ್ಡ ಬೇಟೆ – 350 ಚೀಲ ಅಡಿಕೆ, ಲಾರಿ ವಶ – ಆರೋಪಿಗಳು ಪರಾರಿ

ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…

5 hours ago