ಮುಕ್ಕೂರು : ದಿ.ಪುರುಷೋತ್ತಮ ಗೌಡ ಅಡ್ಯತಕಂಡರವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

September 8, 2019
9:39 PM

ಮುಕ್ಕೂರು: ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಮುಕ್ಕೂರು- ಪೆರುವಾಜೆ  ಶ್ರೀ ಶಾರದೋತ್ಸವ ಸಮಿತಿ ಸ್ಥಾಪಕ ಅಧ್ಯಕ್ಷ ಪುರುಷೋತ್ತಮ ಗೌಡ ಅಡ್ಯತಕಂಡ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಮುಕ್ಕೂರು ಶಾಲಾ ವಠಾರದಲ್ಲಿ  ನಡೆಯಿತು.

Advertisement
Advertisement

ನುಡಿನಮನ‌ ಸಲ್ಲಿಸಿದ‌ ಮುಕ್ಕೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ,  ಪ್ರಗತಿಪರ ಕೃಷಿಕನಾಗಿ ಹಂತ-ಹಂತವಾಗಿ ಜೀವನದಲ್ಲಿ ಯಶಸ್ಸು ಕಂಡಿದ್ದ
ಪುರುಷೋತ್ತಮ ಗೌಡ ಅವರು ಹಲವು ಸಂಘ ಸಂಸ್ಥೆಗಳ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಶಾರದೋತ್ಸವ ಸಮಿತಿ ಹುಟ್ಟು ಹಾಕಿದಲ್ಲದೆ ನಿರಂತರ ಕಾರ್ಯಚಟುವಟಿಕೆ ಮೂಲಕ ಸಮಿತಿಯ ಯಶಸ್ಸಿಗೆ ಶ್ರಮಿಸಿದ್ದರು. ಅವರ ಅಗಲಿಕೆ ಊರಿಗೆ ತುಂಬಲಾರದ ನಷ್ಟ ಎಂದರು.

ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್ ಕಾನಾವು, ಅನಿರೀಕ್ಷಿತವಾಗಿ ಅಗಲಿದ ಪುರುಷೋತ್ತಮ ಗೌಡ ಅವರ ಅಗಲಿಕೆ ನಮಗೆಲ್ಲರಿಗೂ ದುಃಖ ತಂದಿದೆ‌‌ ಎಂದರು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಾತನಾಡಿ, ಬಾಳಿ‌ ಬದುಕಬೇಕಿದ್ದ ವಯಸ್ಸಿನಲ್ಲಿ ಪುರುಷೋತ್ತಮ ಅವರನ್ನು ವಿಧಿ ತನ್ನತ್ತ ಸೆಳೆದುಕೊಂಡಿದೆ. ಅವರ ಸಾಮಾಜಿಕ‌ ಕಾರ್ಯವನ್ನು ಮುನ್ನಡೆಸುವ ಮೂಲಕ ಅವರ ನೆನೆಪು ಶಾಶ್ವತವನ್ನಾಗಿಸುವ ಪ್ರಯತ್ನ ನಾವು ಮಾಡೋಣ ಎಂದರು.

ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ ಮಾತನಾಡಿ, ಎಲ್ಲ‌ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಎಲ್ಲರೊಂದಿಗೆ ಒಡನಾಡಿಯಾಗಿ ಬೆರೆತವರು‌ ಎಂದು‌‌ ಅವರನ್ನು ಸ್ಮರಿಸಿದರು.

ಶಾರದೋತ್ಸವ ಸಮಿತಿ ಅಧ್ಯಕ್ಷ ಸಂಜೀವ ಗೌಡ ಬೈಲಂಗಡಿ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್ ಕಾನಾವು, ಎಸ್ .ಡಿ.ಎಂ.ಸಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ, ಚೆನ್ನಾವರ ಅಭ್ಯುದಯ ಯುವಕ ಮಂಡಲ ಅಧ್ಯಕ್ಷ ದೀಕ್ಷಿತ್ ಜೈನ್, ಜ್ಯೋತಿ ಯುವಕ ಮಂಡಲ ಕಾರ್ಯದರ್ಶಿ ಸತ್ಯಪ್ರಸಾದ್ ಕಂಡಿಪ್ಪಾಡಿ, ಸುಬ್ರಾಯ ಭಟ್ ನೀರ್ಕಜೆ,  ಕುಶಾಲಪ್ಪ ಗೌಡ ಪೆರುವಾಜೆ, ತಿರುಮಲೇಶ್ವರ ಭಟ್ ಕಾನಾವು ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಶಾರದೋತ್ಸವ ಸಮಿತಿ ಕಾರ್ಯದರ್ಶಿ ಕಿರಣ್ ಚಾಮುಂಡಿಮೂಲೆ‌ ಸ್ವಾಗತಿಸಿ, ಕುಂಡಡ್ಕ-ಮುಕ್ಕೂರು

ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಎನ್.ಕೆ.ವಂದಿಸಿದರು. ಜ್ಯೋತಿ ಯುವಕ ಮಂಡಲ ಕಾರ್ಯದರ್ಶಿ ನಾರಾಯಣ ಕೊಂಡೆಪ್ಪಾಡಿ ನಿರೂಪಿಸಿದರು. ದಿವಾಕರ ಬೀರುಸಾಗು, ರೂಪಾನಂದ ಸಹಕರಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror