Advertisement
ನಮ್ಮೂರ ಸುದ್ದಿ

ಮುಕ್ಕೂರು : ದಿ.ಪುರುಷೋತ್ತಮ ಗೌಡ ಅಡ್ಯತಕಂಡರವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

Share

ಮುಕ್ಕೂರು: ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಮುಕ್ಕೂರು- ಪೆರುವಾಜೆ  ಶ್ರೀ ಶಾರದೋತ್ಸವ ಸಮಿತಿ ಸ್ಥಾಪಕ ಅಧ್ಯಕ್ಷ ಪುರುಷೋತ್ತಮ ಗೌಡ ಅಡ್ಯತಕಂಡ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಮುಕ್ಕೂರು ಶಾಲಾ ವಠಾರದಲ್ಲಿ  ನಡೆಯಿತು.

ನುಡಿನಮನ‌ ಸಲ್ಲಿಸಿದ‌ ಮುಕ್ಕೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ,  ಪ್ರಗತಿಪರ ಕೃಷಿಕನಾಗಿ ಹಂತ-ಹಂತವಾಗಿ ಜೀವನದಲ್ಲಿ ಯಶಸ್ಸು ಕಂಡಿದ್ದ
ಪುರುಷೋತ್ತಮ ಗೌಡ ಅವರು ಹಲವು ಸಂಘ ಸಂಸ್ಥೆಗಳ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಶಾರದೋತ್ಸವ ಸಮಿತಿ ಹುಟ್ಟು ಹಾಕಿದಲ್ಲದೆ ನಿರಂತರ ಕಾರ್ಯಚಟುವಟಿಕೆ ಮೂಲಕ ಸಮಿತಿಯ ಯಶಸ್ಸಿಗೆ ಶ್ರಮಿಸಿದ್ದರು. ಅವರ ಅಗಲಿಕೆ ಊರಿಗೆ ತುಂಬಲಾರದ ನಷ್ಟ ಎಂದರು.

ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್ ಕಾನಾವು, ಅನಿರೀಕ್ಷಿತವಾಗಿ ಅಗಲಿದ ಪುರುಷೋತ್ತಮ ಗೌಡ ಅವರ ಅಗಲಿಕೆ ನಮಗೆಲ್ಲರಿಗೂ ದುಃಖ ತಂದಿದೆ‌‌ ಎಂದರು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಾತನಾಡಿ, ಬಾಳಿ‌ ಬದುಕಬೇಕಿದ್ದ ವಯಸ್ಸಿನಲ್ಲಿ ಪುರುಷೋತ್ತಮ ಅವರನ್ನು ವಿಧಿ ತನ್ನತ್ತ ಸೆಳೆದುಕೊಂಡಿದೆ. ಅವರ ಸಾಮಾಜಿಕ‌ ಕಾರ್ಯವನ್ನು ಮುನ್ನಡೆಸುವ ಮೂಲಕ ಅವರ ನೆನೆಪು ಶಾಶ್ವತವನ್ನಾಗಿಸುವ ಪ್ರಯತ್ನ ನಾವು ಮಾಡೋಣ ಎಂದರು.

ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ ಮಾತನಾಡಿ, ಎಲ್ಲ‌ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಎಲ್ಲರೊಂದಿಗೆ ಒಡನಾಡಿಯಾಗಿ ಬೆರೆತವರು‌ ಎಂದು‌‌ ಅವರನ್ನು ಸ್ಮರಿಸಿದರು.

ಶಾರದೋತ್ಸವ ಸಮಿತಿ ಅಧ್ಯಕ್ಷ ಸಂಜೀವ ಗೌಡ ಬೈಲಂಗಡಿ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್ ಕಾನಾವು, ಎಸ್ .ಡಿ.ಎಂ.ಸಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ, ಚೆನ್ನಾವರ ಅಭ್ಯುದಯ ಯುವಕ ಮಂಡಲ ಅಧ್ಯಕ್ಷ ದೀಕ್ಷಿತ್ ಜೈನ್, ಜ್ಯೋತಿ ಯುವಕ ಮಂಡಲ ಕಾರ್ಯದರ್ಶಿ ಸತ್ಯಪ್ರಸಾದ್ ಕಂಡಿಪ್ಪಾಡಿ, ಸುಬ್ರಾಯ ಭಟ್ ನೀರ್ಕಜೆ,  ಕುಶಾಲಪ್ಪ ಗೌಡ ಪೆರುವಾಜೆ, ತಿರುಮಲೇಶ್ವರ ಭಟ್ ಕಾನಾವು ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಶಾರದೋತ್ಸವ ಸಮಿತಿ ಕಾರ್ಯದರ್ಶಿ ಕಿರಣ್ ಚಾಮುಂಡಿಮೂಲೆ‌ ಸ್ವಾಗತಿಸಿ, ಕುಂಡಡ್ಕ-ಮುಕ್ಕೂರು

ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಎನ್.ಕೆ.ವಂದಿಸಿದರು. ಜ್ಯೋತಿ ಯುವಕ ಮಂಡಲ ಕಾರ್ಯದರ್ಶಿ ನಾರಾಯಣ ಕೊಂಡೆಪ್ಪಾಡಿ ನಿರೂಪಿಸಿದರು. ದಿವಾಕರ ಬೀರುಸಾಗು, ರೂಪಾನಂದ ಸಹಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

19 minutes ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

12 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

20 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

1 day ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago