Advertisement
ಸುದ್ದಿಗಳು

ಮುಕ್ಕೂರು : ನಾಲ್ಕನೇ ವರ್ಷದ ಶ್ರೀ ಶಾರದೋತ್ಸವ

Share

ಬೆಳ್ಳಾರೆ :ಭಗವಂತನ ಸ್ಮರಣೆಯಂದರೆ ತಾಯಿಯ ಸ್ಮರಣೆಯಂತೆ. ಹಾಗಾಗಿ ಶಾರದೆಯ ಮುಂದೆ ನಿಂತು ಪ್ರಾರ್ಥಿಸುವ ಸಂದರ್ಭ ತಾಯಿಯ ಬಳಿ ನಿವೇದನ ಮಾಡುವಂತಹ ಮನಸ್ಸು ನಮ್ಮದಾಗಿರಬೇಕು ಎಂದು ವಾಗ್ಮಿ, ಪುತ್ತೂರು ಅಂಬಿಕಾ ವಿದ್ಯಾಸಂಸ್ಥೆಯ ಉಪನ್ಯಾಸಕ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು.

ಮುಕ್ಕೂರು-ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಮುಕ್ಕೂರು ಶಾಲಾ ವಠಾರದಲ್ಲಿ ನಡೆದ 4 ನೇ ವರ್ಷದ ಶ್ರೀ ಶಾರದೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಧಾರ್ಮಿಕ ಅಂದರೆ ಧರ್ಮ ಕಾರ್ಯ ಎಂದರ್ಥ. ಧರ್ಮ ಕೆಲಸಕ್ಕಿಂತ ಶ್ರೇಷ್ಟ ಬೇರೊಂದಿಲ್ಲ ಎಂದ ಅವರು, ಸಂಸ್ಕಾರ,‌ ಸಂಸ್ಕೃತಿಯನ್ನು ಎಳೆ ಮಕ್ಕಳಲ್ಲಿ ಬೆಳೆಸುವ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದರಂತಹ ಮಹಾತ್ಮರ ಚಿಂತನೆಗಳನ್ನು ತಿಳಿಸುವ ಕಾರ್ಯ ಆಗಬೇಕು‌. ಈ ಮೂಲಕ ಅವರನ್ನು ಧರ್ಮಮಾರ್ಗದಲ್ಲಿ ಮುನ್ನಡೆಸುವ ಕೆಲಸ ಆಗಬೇಕು ಎಂದು ಅವರು ಹೇಳಿದರು.

ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿ ಸದಸ್ಯೆ ರಾಜೀವಿ ರೈ ಪುಡ್ಕಜೆ ಮಾತನಾಡಿ, ಜಾತಿ, ಮತ, ಪಕ್ಷದ ಬೇಧವಿಲ್ಲದೆ ಸಂಘಟಿತರಾಗಿ ದೇವರ ಕಾರ್ಯ ಮಾಡಿದಾಗ ಅದರಿಂದ ಫಲ ಸಿಗುತ್ತದೆ ಎಂದರು.

ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ನೀರ್ಕಜೆ ಮಾತನಾಡಿ, ಮುಕ್ಕೂರಿನಲ್ಲಿ ಎಲ್ಲರೂ ಸೇರಿ ಶಾರದೋತ್ಸವವನ್ನು ಆಚರಿಸುವ ಮೂಲಕ ಭಗವಂತನನ್ನು ಸ್ಮರಿಸುವ ಕಾರ್ಯ ನಡೆದಿದೆ ಎಂದರು.

ಮುಕ್ಕೂರು ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಉಪಾಧ್ಯಕ್ಷ ಪ್ರಸಾದ್ ಕುಂಡಡ್ಕ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಅಂಚೆ ವಿತರಕ ಪೂವಪ್ಪ ಪೂಜಾರಿ ಮುಕ್ಕೂರು, ನಿವೃತ್ತ ಬ್ಯಾಂಕ್ ಉದ್ಯೋಗಿ ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಮುಕ್ಕೂರು ಶಾಲಾ ಎಸ್ ಡಿಎಂಸಿ ಉಪಾಧ್ಯಕ್ಷೆ ಪದ್ಮಾವತಿ ದೇವಿಮೂಲೆ ಶುಭಹಾರೈಸಿದರು. ಐತ್ತ ಪಾಟಾಜೆ ಉಪಸ್ಥಿತರಿದ್ದರು.

ಶಾರದೋತ್ಸವ ಸಮಿತಿಯ ನಾರಾಯಣ ಕೊಂಡೆಪ್ಪಾಡಿ ಪ್ರಸ್ತಾವನೆಗೈದು ಸ್ವಾಗತಿಸಿದರು. ಸುದೀಪ್ ಕೊಂಡಪ್ಪಾಡಿ ವಂದಿಸಿದರು. ಸಮಿತಿ ಕಾರ್ಯದರ್ಶಿ ಕಿರಣ್ ಚಾಮುಂಡಿಮೂಲೆ ಬಹುಮಾನ ಪಟ್ಟಿ ವಾಚಿಸಿದರು. ಸುಸ್ಮಿತಾ ಕೊಂಡೆಪ್ಪಾಡಿ ನಿರೂಪಿಸಿದರು.ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಶಾರಾದೆಯ ಶೋಭಾಯಾತ್ರೆ

ಬೆಳಗ್ಗೆ ಶಾರದಾ ಪ್ರತಿಷ್ಟೆ, ಪೂಜೆ, ಗಣಹೋಮ, ಅಕ್ಷರಾಭ್ಯಾಸ, ಮಹಾಪೂಜೆ, ವಾಹನಪೂಜೆ, ಬಳಿಕ ಅನ್ನಸಂತರ್ಪಣೆ ನಡೆಯಿತು. ಕಾಣಿಯೂರು-ಬೆಳಂದೂರು ಶ್ರೀ ವಿಷ್ಣುಪ್ರಿಯಾ ಭಜನ ಮಂಡಳಿ ಸದಸ್ಯರಿಂದ ಭಜನೆ ನಡೆಯಿತು. ಸಂಜೆ ಮುಕ್ಕೂರು ವಠಾರದಿಂದ ಶೋಭಾಯಾತ್ರೆ ಆರಂಭಗೊಂಡು ಗೌರಿ ಹೊಳೆಯಲ್ಲಿ ಜಲಸ್ಥಂಭನ ನಡೆಯಿತು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

2 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

2 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

20 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago