ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಸುಳ್ಯ ತಾಲೂಕು ಘಟಕದ ವತಿಯಿಂದ ಕೆಂದ್ರ ಸರ್ಕಾರದ ಮುಕ್ತ ಮಾರುಕಟ್ಟೆ ಒಪ್ಪಂದಗಳು ಮತ್ತು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ( ಆರ್.ಸಿ.ಇ.ಪಿ) ವಿರುದ್ಧ ಖಂಡನಾ ಸಭೆ ನಡೆಯಿತು.
ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಕ್ತ ಮಾರುಕಟ್ಟೆ ಒಪ್ಪಂದ ಮತ್ತು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವವನ್ನು ವಿರೋದಿಸುವ ನಿರ್ಣಯ ಸರ್ವಾನುಮತದಿಂದ ಕೈಗೊಳ್ಳಲಾಯಿತು.
ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ವಿಚಾರ ಮಂಡಿಸಿ ರೈತ ವಿರೋಧಿ ನೀತಿಯನ್ನು ಖಂಡಿಸುವುದಾಗಿ ಹೇಳಿದರು. ಈ ನಿರ್ಣಯದ ಪ್ರತಿಯನ್ನು ಸುಳ್ಯದ ತಹಸೀಲ್ದಾರ್ ಮೂಲಕ ಜಿಲ್ಲಾಧಿಖಾರಿಗಳಿಗೆ ಹಾಗು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಮುಖ್ಯ ಮಂತ್ರಿ ಹಾಗು ಪ್ರಧಾನಮಂತ್ರಿಗೂ ತಲುಪಿಸಲಾಗುವುದು ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಈ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ತಿಳಿಸಲಾಗುವುದು. ದೇಶದಾದ್ಯಂತ 224 ರೈತ ಸಂಘಟನೆಗಳು ಈ ಒಪ್ಪಂದ ವಿರೋಧಿಸಿ ಹೋರಾಟ ನಡೆಸುತ್ತಿವೆ ಎಂದು ರವಿಕಿರಣ ಪುಣಚ ತಿಳಿಸಿದರು .
ಸಭೆಯಲ್ಲಿ ರೈತ ಸಂಘ ಸುಳ್ಯ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ,ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ ,ಉಪಾಧ್ಯಕ್ಷರಾದ ಮುರಳೀಧರ ಅಡ್ಕಾರು ,ಖಜಾಂಜಿ ದೇವಪ್ಪ ಕುಂದಲ್ಪಾಡಿ ,ವಲಯ ಅದ್ಯಕ್ಷರಾದ ಲೋಕಯ್ಯ ಅತ್ಯಾಡಿ ,ತೀರ್ಥರಮ ಉಳುವಾರು ಹಾಗು ಗ್ರಾಮಗಳ ರೈತರು ಉಪಸ್ಥಿತರಿದ್ದರು .
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…