ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಸುಳ್ಯ ತಾಲೂಕು ಘಟಕದ ವತಿಯಿಂದ ಕೆಂದ್ರ ಸರ್ಕಾರದ ಮುಕ್ತ ಮಾರುಕಟ್ಟೆ ಒಪ್ಪಂದಗಳು ಮತ್ತು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ( ಆರ್.ಸಿ.ಇ.ಪಿ) ವಿರುದ್ಧ ಖಂಡನಾ ಸಭೆ ನಡೆಯಿತು.
ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಕ್ತ ಮಾರುಕಟ್ಟೆ ಒಪ್ಪಂದ ಮತ್ತು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವವನ್ನು ವಿರೋದಿಸುವ ನಿರ್ಣಯ ಸರ್ವಾನುಮತದಿಂದ ಕೈಗೊಳ್ಳಲಾಯಿತು.
ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ವಿಚಾರ ಮಂಡಿಸಿ ರೈತ ವಿರೋಧಿ ನೀತಿಯನ್ನು ಖಂಡಿಸುವುದಾಗಿ ಹೇಳಿದರು. ಈ ನಿರ್ಣಯದ ಪ್ರತಿಯನ್ನು ಸುಳ್ಯದ ತಹಸೀಲ್ದಾರ್ ಮೂಲಕ ಜಿಲ್ಲಾಧಿಖಾರಿಗಳಿಗೆ ಹಾಗು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಮುಖ್ಯ ಮಂತ್ರಿ ಹಾಗು ಪ್ರಧಾನಮಂತ್ರಿಗೂ ತಲುಪಿಸಲಾಗುವುದು ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಈ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ತಿಳಿಸಲಾಗುವುದು. ದೇಶದಾದ್ಯಂತ 224 ರೈತ ಸಂಘಟನೆಗಳು ಈ ಒಪ್ಪಂದ ವಿರೋಧಿಸಿ ಹೋರಾಟ ನಡೆಸುತ್ತಿವೆ ಎಂದು ರವಿಕಿರಣ ಪುಣಚ ತಿಳಿಸಿದರು .
ಸಭೆಯಲ್ಲಿ ರೈತ ಸಂಘ ಸುಳ್ಯ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ,ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ ,ಉಪಾಧ್ಯಕ್ಷರಾದ ಮುರಳೀಧರ ಅಡ್ಕಾರು ,ಖಜಾಂಜಿ ದೇವಪ್ಪ ಕುಂದಲ್ಪಾಡಿ ,ವಲಯ ಅದ್ಯಕ್ಷರಾದ ಲೋಕಯ್ಯ ಅತ್ಯಾಡಿ ,ತೀರ್ಥರಮ ಉಳುವಾರು ಹಾಗು ಗ್ರಾಮಗಳ ರೈತರು ಉಪಸ್ಥಿತರಿದ್ದರು .
ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…
ಕಳೆದ ವರ್ಷ ಮುಂಗಾರು ಮಳೆ(Mansoon Rain) ಕೊಟ್ಟ ಹಿನ್ನೆಲೆ, ಈ ಬಾರಿ ರಾಜ್ಯದ್ಯಂತ…
ಕಾಳುಮೆಣಸಿನ ಧಾರಣೆ ಏರಿಕೆಯಾಗಿದೆ. ಸದ್ಯ 615 ರೂಪಾಯಿಗೆ ಕಾಳುಮೆಣಸು ಖರೀದಿ ಆರಂಭವಾಗಿದೆ.
ರಬ್ಬರ್ ಆಮದು ತಡೆಯಾದರೆ ಟಯರ್ ಉದ್ಯಮ ಹಾಗೂ ರಬ್ಬರ್ ಬೆಳೆಗಾರರ ರಕ್ಷಣೆ ಸಾಧ್ಯವಿದೆ…
ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್,…
ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…