Advertisement
ಸುದ್ದಿಗಳು

ಮುಕ್ತ ವ್ಯಾಪಾರ ಒಪ್ಪಂದಗಳಿಂದ ಕೃಷಿಕರಿಗೆ ನಷ್ಟ : ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ

Share

ಮಡಿಕೇರಿ :  ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದಗಳಿಂದ ಕೃಷಿ ಸಂಬಂಧಿತ ವಲಯಗಳನ್ನು ಹೊರಗಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಡಗು ಜಿಲ್ಲಾ ಘಟಕಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದವು.

ನಗರದ ಕಾವೇರಿ ಕಲಾಕ್ಷೇತ್ರದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಮುಕ್ತ ವ್ಯಾಪಾರ ಒಪ್ಪಂದಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೇಂದ್ರ ಸರಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಆರ್.ಸಿ.ಇ.ಪಿ. ಒಪ್ಪಂದದ ಮೂಲಕ ದೇಶದ ಕೃಷಿಯನ್ನು ತೆರಿಗೆ ಮುಕ್ತ ವ್ಯಾಪಾರ ವಲಯಕ್ಕೆ ತೆರೆದಿಡಲು ಒಪ್ಪಂದ ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ. ಒಂದು ವೇಳೆ ಇದು ಜಾರಿಯಾದರೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಕ್ಷೇತ್ರಕ್ಕೆ ನಷ್ಟವಾಗುವುದಲ್ಲದೆ ಉದ್ಯೋಗವೂ ಕಡಿತವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಪ್ರಮುಖರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಒಪ್ಪಂದವನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.

ಕರಿಮೆಣಸು ದರ ಕುಸಿತಕ್ಕೆ ಇಂತಹ ಒಪ್ಪಂದಗಳೇ ಕಾರಣವಾಗಿದೆ ಎಂದು ಆರೋಪಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ, ಆಮದು ನೀತಿ ಬದಲಾಗಬೇಕೆಂದು ತಿಳಿಸಿದರು. ಮುಕ್ತ ವ್ಯಾಪಾರ ಒಪ್ಪಂದದಿಂದ ಬಹುತೇಕ ಕೃಷಿ ಸರಕುಗಳ ಮೇಲಿನ ಆಮದು ಸುಂಕ ಶಾಶ್ವತವಾಗಿ ಶೂನ್ಯವಾಗುತ್ತದೆ, ಅನೇಕ ದೇಶಗಳು ತಮ್ಮ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ಭಾರತದಲ್ಲಿ ಮಾರಲು ಸಾಧ್ಯವಾಗುತ್ತದೆ. ಇದರಿಂದಾಗಿ ಭಾರತದ ಲಕ್ಷಾಂತರ ಸಣ್ಣ ರೈತರ ಮತ್ತು ವಿಶೇಷವಾಗಿ ಮಹಿಳೆಯರ ಜೀವನೋಪಾಯವನ್ನು ಬೆಂಬಲಿಸುವ ಹೈನುಗಾರಿಕಾ ಕ್ಷೇತ್ರ ಅಪಾಯಕ್ಕೆ ಸಿಲುಕಲಿದೆ ಎಂದರು.

ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿ ಚಟ್ರುಮಾಡ ಸುಜೈ ಬೋಪಯ್ಯ, ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಖಜಾಂಚಿ ಸಬಿತ್ ಭೀಮಯ್ಯ, ರೈತ ಮುಖಂಡರಾದ ಚಕ್ಕೇರ ಕಾಳಯ್ಯ, ಚಂಗುಲಂಡ ಸೂರಜ್, ಆಲೆಮಾಡ ಮಂಜುನಾಥ್, ಮೋಟಯ್ಯ, ಉತ್ತಯ್ಯ, ಸೋಮಣ್ಣ, ಅಶೋಕ್, ಗಿರಿ, ಶೆಟ್ಟಿಗೇರಿ ಹೋಬಳಿ ಸಂಚಾಲಕ ಚಟ್ಟಂಗಡ ಕಾರ್ಯಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

2 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

8 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

8 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

8 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

16 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

18 hours ago