Advertisement
ರಾಜ್ಯ

ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಲ್ಲಿ 137.32 ಕೋಟಿ ರೂ. ಸಂಗ್ರಹ

Share

ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿಗೆ ಸ್ಪಂದಿಸಿರುವ ನಾಡಿನ ಜನತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾಕಷ್ಟು ಮಂದಿ ಸ್ವಯಂ ಸ್ಫೂರ್ತಿಯಿಂದ ದೇಣಿಗೆ ನೀಡುತ್ತಿದ್ದಾರೆ.
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿ ಖಾತೆಗೆ ಆ. 9 ರಿಂದ ಸೆ. 18 ರ ವರೆಗೆ 137.32 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ.

Advertisement
Advertisement

ವಿವಿಧ ಸಂಘ, ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಸರಕಾರಿ ನೌಕರರು, ವಿವಿಧ ನಿಗಮ-ಮಂಡಳಿಗಳ ನೌಕರರು  ದೇಣಿಗೆ ನೀಡಿದ್ದು, ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 25 ಕೋಟಿ ರೂ., ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಅಧ್ಯಕ್ಷೆ ಸುಧಾ ಮೂರ್ತಿ ಅವರು 10 ಕೋಟಿ ರೂ. ದೇಣಿಗೆ ನೀಡಿ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ಅಂತೆಯೇ ಎನ್ಎಂಡಿಸಿ 10 ಕೋಟಿ ರೂ. , ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 5 ಕೋಟಿ ರೂ. ದೇಣಿಗೆ ನೀಡಿದ್ದಾರೆ. ರಾಜ್ಯ ಸರಕಾರೆಇ ನೌಕರರ ಸಂಘ, ನಿವೃತ್ತ ನೌಕರರ ಸಂಘಗಳು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಒಂದು ದಿನದ ವೇತನ ನೀಡುವುದಾಗಿ ವಾಗ್ದಾನ ಮಾಡಿವೆ. ನಿಗಮ, ಮಂಡಳಿಗಳು ಸಹ  ದೇಣಿಗೆ ನೀಡಿದ್ದಾರೆ.

ಉದ್ಯಮಿಗಳು, ಸೇವಾ ಸಂಸ್ಥೆಗಳು, ಸಾರ್ವಜನಿಕರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಂತ್ರಸ್ತರ ನೆರವಿಗೆ ದೇಣಿಗೆ ನೀಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ದೇಣಿಗ ನೀಡಲು ಬಯಸುವವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಈ ಕೆಳಕಂಡ ಬ್ಯಾಂಕ್ ಖಾತೆಗಳಿಗೆ ಆನ್ಲೈನ್ ನಲ್ಲಿ ದೇಣಿಗೆ ಜಮಾ ಮಾಡಬಹುದು. ಅಥವಾ ಚೆಕ್ ಅಥವಾ ಡಿಡಿ ಮೂಲಕವೂ ದೇಣಿಗೆ ನೀಡಬಹುದು.

Chief Minister’s Relief Fund (Natural Calamity)
Bank: State Bank of India,
Branch: Vidhanasoudha
A/C No. 37887098605
IFSC Code: SBIN0040277
MICR No: 56002419

Bank Name: HDFC Bank Ltd.
Branch: Seshadripuram, Bangalore
A/C No.: 50100309178784
IFSC Code: HDFC0000367
MICR Code: 560240018

ಇದಲ್ಲದೆ, https://cmrf.karnataka.gov.in ವೆಬ್ ಸೈಟ್ ಮೂಲಕ ಹಾಗೂ ಭೀಮ್, ಪೇಟಿಎಂ, ಫೋನ್ ಪೇ, ಗೂಗಲ್ ಪೇ ಮೊದಲಾದ ಯುಪಿಐ ಆಪ್ ಗಳ ಮೂಲಕವೂ ಹಣ ವರ್ಗಾಯಿಸಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

9 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

9 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago